- Advertisement -
- Advertisement -
ಬೆಳ್ತಂಗಡಿ: ಉಜಿರೆಯ “ಬದುಕು ಕಟ್ಟೋಣ ಬನ್ನಿ” ತಂಡದಿಂದ ಮಂಗಳೂರು ಕೆ.ಎಂ.ಸಿ. ಬ್ಲಡ್ ಬ್ಯಾಂಕ್ ಮತ್ತು ಎ.ಜೆ.ಹಾಸ್ಪಿಟಲ್ ಬ್ಲಡ್ ಬ್ಯಾಂಕ್ ಮಂಗಳೂರು ಇವರ ಸಹಭಾಗಿತ್ವದಲ್ಲಿ ಇಂದು ಉಜಿರೆಯ ಶ್ರೀ ಕೃಷ್ಟಾನುಗ್ರಹ ಸಭಾಭವನದಲ್ಲಿ ನಡೆಯಿತು.
ಈ ಕಾರ್ಯಕ್ರಮದ ಉದ್ಘಾಟನೆಯನ್ನು ವಿಧಾನ ಪರಿಷತ್ ಸದಸ್ಯರಾದ ಶ್ರೀ ಕೆ.ಪ್ರತಾಪ್ ಸಿಂಹ ನಾಯಕ್ ನೆರವೇರಿಸಿದರು. ಅಧ್ಯಕ್ಷತೆಯನ್ನುರೋಟರಿ ಕ್ಲಬ್ ಬೆಳ್ತಂಗಡಿಯ ಅಧ್ಯಕ್ಷರಾದ ರೊ.ಬಿ.ಕೆ.ಧನಂಜಯ್ ರಾವ್ ವಹಿಸಿದರು.
ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯರಾದ ಕೆ. ಹರೀಶ್ ಕುಮಾರ್ , ತುಳು ನಟ ಅರವಿಂದ್ ಬೊಳಾರ್, ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕರಾದ ಲಕ್ಷ್ಮೀ ಗ್ರೂಪ್ಸ್ ಮಾಲಕ ಮೋಹನ್ ಕುಮಾರ್ ಮತ್ತು ಸಂಧ್ಯಾ ಟ್ರೇಡರ್ಸ್ ಮಾಲಕ ರಾಜೇಶ್ ಪೈ ಭಾಗವಹಿಸಿದರು . 20 ಕ್ಕೂ ಅಧಿಕ ಸಂಘ ಸಂಸ್ಥೆಗಳ 600 ಮಂದಿ ರಕ್ತದಾನದಲ್ಲಿ ಭಾಗವಹಿಸಿದರು.
- Advertisement -