- Advertisement -
- Advertisement -
ಬಾಗಲಕೋಟೆ: ಕೊರೊನಾ ಸೋಂಕಿನಿಂದ ಜಿಲ್ಲೆಯ ಶಿಕ್ಷಕ ವರ್ಗ ತತ್ತರಿಸಿದ್ದು, ಒಂದು ತಿಂಗಳಲ್ಲೇ 15 ಮಂದಿ ಶಿಕ್ಷಕರು ಸಾವನ್ನಪ್ಪಿರುವುದು ಆತಂಕಕ್ಕೀಡು ಮಾಡಿದೆ.
ಜಿಲ್ಲೆಯಲ್ಲಿ 50ಕ್ಕೂ ಹೆಚ್ಚು ಶಿಕ್ಷಕರು ಸೋಂಕಿಗೆ ಸಿಲುಕಿದ್ದಾರೆ. ಗಂಭೀರ ಪರಿಸ್ಥಿತಿಯಲ್ಲಿರುವ ಕೆಲವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ, ಮತ್ತೆ ಕೆಲವರು ಮನೆಯಲ್ಲೇ ಹೋಂ ಕ್ವಾರಂಟೈನ್ ಆಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಹುನಗುಂದ, ಇಳಕಲ್ ತಾಲ್ಲೂಕಿನಲ್ಲಿ ಒಂದೇ ದಿನ ಐದು ಮಂದಿ ಶಿಕ್ಷಕರು ಕೊರೊನಾದಿಂದ ಪ್ರಾಣ ಕಳೆದುಕೊಂಡಿದ್ದಾರೆ. ಈ ಭಾಗದಲ್ಲಿ ಹೆಚ್ಚಿನ ಶಿಕ್ಷಕರಿಗೆ ಕೊರೊನಾ ಸೋಂಕು ತಗುಲಿರುವುದರಿಂದ ಆತಂಕ ಹೆಚ್ಚಾಗಿದೆ.
- Advertisement -