Tuesday, May 14, 2024
Homeತಾಜಾ ಸುದ್ದಿವಿಶ್ವ ಹಿಂದು ಪರಿಷತ್ ಬೆಳ್ತಂಗಡಿ ತಾಲೂಕು ಮತ್ತು ಶ್ರಮಿಕ ಸೇವಾ ಟ್ರಸ್ಟ್ ಬೆಳ್ತಂಗಡಿ ವತಿಯಿಂದ ಭಜನಾ...

ವಿಶ್ವ ಹಿಂದು ಪರಿಷತ್ ಬೆಳ್ತಂಗಡಿ ತಾಲೂಕು ಮತ್ತು ಶ್ರಮಿಕ ಸೇವಾ ಟ್ರಸ್ಟ್ ಬೆಳ್ತಂಗಡಿ ವತಿಯಿಂದ ಭಜನಾ ಸ್ಪರ್ಧೆ

spot_img
- Advertisement -
- Advertisement -

ಬೆಳ್ತಂಗಡಿ: ವಿಶ್ವ ಹಿಂದು ಪರಿಷತ್ ಬೆಳ್ತಂಗಡಿ ತಾಲೂಕು ಮತ್ತು ಶ್ರಮಿಕ ಸೇವಾ ಟ್ರಸ್ಟ್ ಬೆಳ್ತಂಗಡಿ ವತಿಯಿಂದ ತಾಲೂಕಿನ ಭಜನಾ ಮಂಡಳಿಗಳನ್ನು ಉತ್ತೇಜಿಸುವ ದೃಷ್ಠಿಯಿಂದ, ಯುವ ಜನತೆಯಲ್ಲಿ ಸಧ್ವಿಚಾರ ಧಾರೆಯನ್ನು, ಧಾರ್ಮಿಕ ಜಾಗೃತಿಯನ್ನು ಪ್ರೇರೇಪಿಸುವ ಸದಾಶಯದೊಂದಿಗೆ ತಾಲೂಕಿನ ಭಜನಾ ಮಂಡಗಳಿಗೆ ತಾಲೂಕು ಮಟ್ಟದ ಭಜನಾ ಸ್ಪರ್ಧೆಯನ್ನು ಏರ್ಪಡಿಸುತ್ತಿದ್ದು ಭಜನಾ ಸ್ಪರ್ಧೆಯು ಅಯಾಯ ಭಜನಾ ಮಂಡಳಿಗಳಲ್ಲಿಯೇ ನಡೆಯಲಿದೆ.

ಈ ಭಜನಾ ಸ್ಪರ್ಧೆಯನ್ನು ದಿನಾಂಕ:13.02.2022ರ ಆದಿತ್ಯವಾರದಂದು ಶ್ರೀ ಶಾರದಾಂಬ ಭಜನಾ ಮಂಡಳಿ, ಶಾರದನಗರ, ಬುಳೆಕ್ಕಾರ್ ಕುಕ್ಕೇಡಿ ಇಲ್ಲಿ ಪೂರ್ವಾಹ್ನ 8:30 ಗಂಟೆಗೆ ಶಾಸಕರಾದ ಶ್ರೀ ಹರೀಶ್ ಪೂಂಜರವರು ಉದ್ಘಾಟಿಸಲಿದ್ದಾರೆ. ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷತ್‍ನ ವಿಭಾಗ ಸಹ ಕಾರ್ಯದರ್ಶಿಯವರಾದ ಶ್ರೀ ದೇವಿಪ್ರಸಾದ್ ಶೆಟ್ಟಿ, ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯರಾದ ಶ್ರೀ ದೇವೆಂದ್ರ ಹೆಗ್ಡೆ ಕೊಕ್ರಾಡಿ, ವಿಶ್ವ ಹಿಂದೂ ಪರಿಷತ್ ಬೆಳ್ತಂಗಡಿ ಪ್ರಖಂಡದ ಅಧ್ಯಕ್ಷರಾದ ಶ್ರೀ ದಿನೇಶ್ ಚಾರ್ಮಾಡಿ, ವೇಣೂರು ಪ್ರಖಂಡದ ಅಧ್ಯಕ್ಷರಾದ ಶ್ರೀ ಶಶಾಂಕ್ ಭಟ್ ಉಪಸ್ಥಿತರಿರುತ್ತಾರೆ.

ಈ ಕಾರ್ಯಕ್ರಮಕ್ಕೆ ಎಲ್ಲಾ ಭಜಕ ಬಂಧುಗಳು, ಹಿಂದೂ ಸಮಾಜದ ಬಂಧಗಳು ಹಾಗೂ ಪತ್ರಿಕಾ ಮಾಧ್ಯಮದ ಮಿತ್ರರು, ದೃಶ್ಯ ಮಾಧ್ಯಮದ ಮಿತ್ರರು ಉಪಸ್ಥಿತರಿರಬೇಕೆಂದು ವಿಶ್ವ ಹಿಂದೂ ಪರಿಷತ್‍ನ ಪುತ್ತೂರು ಜಿಲ್ಲಾ ಸಹ ಕಾರ್ಯದರ್ಶಿ ನವೀನ್ ನೆರಿಯ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

- Advertisement -
spot_img

Latest News

error: Content is protected !!