ಕಲಬುರಗಿ ನಗರದ ಜಗತ್ ವೃತ್ತ ಸೇರಿದಂತೆ 20ಕ್ಕೂ ಹೆಚ್ಚಿನ ಪ್ರಮುಖ ಪ್ರದೇಶಗಳಲ್ಲಿ ಬಜರಂಗದಳದ ಕಾರ್ಯಕರ್ತರು ಪಾಕ್ ಧ್ವಜಗಳನ್ನು ರಸ್ತೆ, ಶೌಚಾಲಯ ಪ್ರದೇಶಗಳಲ್ಲಿ ಅಂಟಿಸಿ ಪಹಲ್ಗಾಮ್ನಲ್ಲಿ ಅಮಾಯಕರ ಮೇಲಿನ ಉಗ್ರರ ದಾಳಿಯನ್ನು ಖಂಡಿಸಿ ಆಕ್ರೋಶ ವ್ಯಕ್ತಪಡಿಸಿದವರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯಿಸಿದ ನಗರ ಪೊಲೀಸ್ ಆಯುಕ್ತ ಡಾ. ಶರಣಪ್ಪ ಎಸ್.ಡಿ, ’ಭಯೋತ್ಪಾದನಾ ಕೃತ್ಯ ಖಂಡಿಸಿ, ವಿವಿಧ ಸಂಘಟನೆಗಳು ವಿವಿಧ ರೀತಿಯಲ್ಲಿ ಪ್ರತಿಭಟನೆಗಳು ನಡೆಸುತ್ತಿದ್ದು, ನಗರದಲ್ಲೂ ಕೆಲ ಕೆಲವರು ಅನುಮತಿ ಇಲ್ಲದೆ ಪಾಕಿಸ್ತಾನ ಧ್ವಜ ಅಂಟಿಸಿರುವುದು ಕಂಡುಬಂದಿದೆ. ಸದ್ಯಕ್ಕೆ ಅನುಮತಿ ಪಡೆಯದೆ ಪ್ರತಿಭಟನೆ ನಡೆಸಿದ 6 ಮಂದಿ ಬಜರಂಗದಳದ ಕಾರ್ಯಕರ್ತರನ್ನು ವಶಕ್ಕೆ ಪಡೆಯಲಾಗಿದೆ,’ ಎಂದು ನಗರ ಪೊಲೀಸ್ ಆಯುಕ್ತ ಡಾ. ಶರಣಪ್ಪ ಎಚ್ಚರಿಸಿದ್ದಾರೆ.
ಇನ್ನು ಘಟನಾ ಸ್ಥಳಕ್ಕೆ ಆಗಮಿಸಿದ ಗುಪ್ತಚರ ಇಲಾಖೆ ಸಿಬ್ಬಂದಿ, ಮತ್ತು ಬ್ರಹ್ಮಪುರ ಠಾಣೆಯ ಪೊಲೀಸರು ಅಂಟಿಸಿದ ಧ್ವಜವನ್ನು ತೆರವುಗೊಳಿಸಿದ್ದಾರೆ.