- Advertisement -
- Advertisement -
ಉಪ್ಪಿನಂಗಡಿ: ಉಪ್ಪಿನಂಗಡಿ ಗ್ರಾಮ ಪಂಚಾಯತ್ ಕಛೇರಿಗೆ ಭೇಟಿ ನೀಡಿ ಅಲ್ಲಿನ ಘನ ಮತ್ತು ದ್ರವ ತ್ಯಾಜ್ಯ ಘಟಕದ ಬಗ್ಗೆ ಮಾಣಿ ಗ್ರಾಮ ಪಂಚಾಯತ್ ಅಧ್ಯಕ್ಷ ಬಾಲಕೃಷ್ಣ ಆಳ್ವ, ಕೊಡಾಜೆಯವರು ಮಾಹಿತಿ ಪಡೆದುಕೊಂಡರು.
ತ್ಯಾಜ್ಯ ಘಟಕಕ್ಕೆ ಕೂಡಾ ಭೇಟಿ ನೀಡಲಾಯಿತು.ಪುತ್ತೂರು ತಾ.ಪಂ ಕಾರ್ಯನಿರ್ವಹಣಾಧಿಕಾರಿ ನವೀನ್ ಭಂಡಾರಿ, ಮಾಣಿ ಗ್ರಾಮ ಪಂಚಾಯತ್ ಸದಸ್ಯ ಮೆಲ್ವಿನ್ ಕಿಶೋರ್ ಮಾರ್ಟಿಸ್, ಅಭಿವೃದ್ಧಿ ಅಧಿಕಾರಿ ಗಿರಿಜಾ, ಉಪ್ಪಿನಂಗಡಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ವಿಲ್ಫ್ರೆಡ್ ರೋಡ್ರಿಗಸ್, ಪೆರಾಜೆ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶಂಭು ಕುಮಾರ್ ಶರ್ಮಾ, ನೆಟ್ಲಮುಡ್ನೂರು ಪಂಚಾಯತ್ ಅಭಿವೃದ್ಧಿ ಅಧಿಕಾರಿ ನಾರಾಯಣ ಗಟ್ಟಿ, ಜಲಪ್ರೇರಕಿ ಲೈಲಾಬಿ ಉಪಸ್ಥಿತರಿದ್ದರು.
- Advertisement -