- Advertisement -
- Advertisement -
ಮಂಗಳೂರು: ರಾಜ್ಯದಲ್ಲಿ ಮತ್ತೆ ಮಳೆಯ ಆರ್ಭಟ ಪ್ರಾರಂಭವಾಗಿದೆ. ಕಡಲಿನಲ್ಲಿ ಅಲೆಗಳ ಅಬ್ಬರ ಹೆಚ್ಚಾಗಿದೆ. ಹೀಗಾಗಿ, ಮಂಗಳೂರು ಬೀಚ್ ಅಭಿವೃದ್ಧಿ ಸಮಿತಿ ಎಚ್ಚರಿಕೆಯೊಂದನ್ನು ನೀಡಿದೆ.
ಬೀಚ್ ಅಭಿವೃದ್ಧಿ ಸಮಿತಿ ಪ್ರವಾಸಿಗರಿಗೆ ನೀರಿಗೆ ಇಳಿಯದಂತೆ ಎಚ್ಚರಿಕೆ ನೀಡಿದ್ದು, ದೂರದಿಂದಲೇ ಸಮುದ್ರವನ್ನು ವೀಕ್ಷಣೆ ಮಾಡಲು ಪ್ರವಾಸಿಗರಿಗೆ ಅವಕಾಶ ನೀಡಲಾಗಿದೆ. ಜಿಲ್ಲಾಡಳಿತ ಪ್ರತೀ ವರ್ಷದಂತೆ ಮೇ 15 ರಿಂದ ಸೆ.15ರ ವರೆಗೆ ಯಾವುದೇ ಜಲಸಾಹಸ ಕ್ರೀಡೆಗಳಿಗೆ ನಿಷೇಧ ಹೇರಿದ್ದು, ಈ ಸಮಯದಲ್ಲಿ ಯಾವುದೇ ವಾಟರ್ಸ್ಟೋರ್ಟ್ಸ್ ನಡೆಸಲು ಅನುಮತಿ ಇರುವುದಿಲ್ಲ.
- Advertisement -