- Advertisement -
- Advertisement -
ಬೆಂಗಳೂರು: ಇಂದು ಬೆಂಗಳೂರು, ಮಂಗಳೂರು ಸೇರಿದಂತೆ ದೇಶದಾದ್ಯಂತ 13 ರಾಜ್ಯಗಳಲ್ಲಿ ರಾಷ್ಟ್ರೀಯ ತನಿಖಾ ದಳ (ಎನ್ಐಎ) ದಾಳಿ ನಡೆಸಿದೆ. ಪಿಎಫ್ಐ ಮತ್ತು ಎಸ್ಡಿಪಿಐ ಕಚೇರಿಗಳ ಮೇಲೆ ದಾಳಿ ಮಾಡಿ ಸುಮಾರು 100ಕ್ಕೂ ಪಿಎಫ್ಐ ನಾಯಕರು, ಕಾರ್ಯಕರ್ತರನ್ನು ವಶಕ್ಕೆ ಪಡೆದುಕೊಂಡಿದೆ.
ಈ ಸಂಬಂಧ ಬೆಂಗಳೂರಿನಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಸುದ್ದಿಗೋಷ್ಠಿ ನಡೆಸಿದ್ದು ಸಂಘಟನೆ ಬ್ಯಾನ್ ಮಾಡುವ ನಿಟ್ಟಿನಲ್ಲಿ ಕಾರ್ಯ ನಡೆಯುತ್ತಿದೆ ಎಂದಿದ್ದಾರೆ. PFI, SDPI ಬ್ಯಾನ್ ಮಾಡುವ ನಿಟ್ಟಿನಲ್ಲಿ ಕೆಲಸ ನಡೆಯುತ್ತಿದೆ. ಕೇಂದ್ರ ಸರ್ಕಾರ ಈ ಕುರಿತು ನಿರ್ಧಾರ ತೆಗೆದುಕೊಳ್ಳುತ್ತೆ. ಸಂಘಟನೆಗಳನ್ನ ಬ್ಯಾನ್ ಮಾಡಲು ಸಮಯ ಬರಬೇಕು ಎಂದಿದ್ದಾರೆ.
- Advertisement -