Saturday, May 4, 2024
Homeಕರಾವಳಿದೀಪಾವಳಿಗೆ ಬೆಂಗಳೂರಿನಿಂದ ಕರಾವಳಿ ಭಾಗಕ್ಕೆ ಬರೋರಿಗೆ ಸಿಹಿ ಸುದ್ದಿ; -ಬೆಂಗಳೂರು -ಮಂಗಳೂರು ವಿಶೇಷ ರೈಲು ಸಂಚಾರ

ದೀಪಾವಳಿಗೆ ಬೆಂಗಳೂರಿನಿಂದ ಕರಾವಳಿ ಭಾಗಕ್ಕೆ ಬರೋರಿಗೆ ಸಿಹಿ ಸುದ್ದಿ; -ಬೆಂಗಳೂರು -ಮಂಗಳೂರು ವಿಶೇಷ ರೈಲು ಸಂಚಾರ

spot_img
- Advertisement -
- Advertisement -

ಮಂಗಳೂರು: ದೀಪಾವಳಿಗೆ ಬೆಂಗಳೂರಿನಿಂದ ಕರಾವಳಿ ಭಾಗಕ್ಕೆ ಬರೋರಿಗೆ ರೈಲ್ವೆ ಇಲಾಖೆ ಸಿಹಿ ಸುದ್ದಿ ಕೊಟ್ಟಿದೆ.  ದೀಪಾವಳಿ ವೇಳೆ ಬೆಂಗಳೂರು ಮೈಸೂರಿನಿಂದ ಕರಾವಳಿ ಭಾಗಗಳಿಗೆ ತೆರಳುವ ಪ್ರಯಾಣಿಕರಿಗಾಗಿ ಮೈಸೂರು-ಬೆಂಗಳೂರು -ಮಂಗಳೂರು ವಿಶೇಷ ರೈಲು ಸಂಚರಿಸಲಿದೆ.ದೀಪಾವಳಿ ಹಬ್ಬದ ಮುಂಚಿನ ದಿನದಂದು ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು ವಿಶೇಷ ರೈಲು ಮೈಸೂರು-ಮಂಗಳೂರು ರೈಲು ಬೆಂಗಳೂರು ಮಾರ್ಗವಾಗಿ ಒಂದು ಟ್ರಿಪ್‌ ಸಂಚಾರ ಮಾಡುತ್ತದೆ ಎಂದು ನೈರುತ್ಯ ರೈಲ್ವೆ ತಿಳಿಸಿದೆ.

ರೈಲು ನಂಬರ್‌ 07303 ಮೈಸೂರಿನಿಂದ ಮಂಗಳೂರಿಗೆ ನವೆಂಬರ್ 10 ರಂದು ರಾತ್ರಿ 8.30ಕ್ಕೆ ಮೈಸೂರಿನಿಂದ ಹೊರಟು ನವೆಂಬರ್‌ 11 ರಂದು ಬೆಳಿಗ್ಗೆ 9:40 ಕ್ಕೆ ಮಂಗಳೂರು ತಲುಪಲಿದೆ. ರೈಲು ಮಾರ್ಗದಲ್ಲಿ ಮಂಡ್ಯ, ಕೆಂಗೇರಿ, ಕೆಎಸ್‌ಆರ್ ಬೆಂಗಳೂರು, ಯಶವಂತಪುರ, ಚಿಕ್ಕಬಾಣಾವರ, ನೆಲಮಂಗಲ, ಕುಣಿಗಲ್, ಶ್ರವಣಬೆಳಗೊಳ, ಚನ್ನರಾಯಪಟ್ಟಣ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರಸ್ತೆ, ಕಬಕ ಪುತ್ತೂರು, ಬಂಟ್ವಾಳದಲ್ಲಿ ನಿಲುಗಡೆಯಾಗಲಿದೆ.

ರೈಲು ನಂಬರ್‌ 07304 ಮಂಗಳೂರಿನಿಂದ ಮೈಸೂರಿಗೆ ನವೆಂಬರ್‌ 11 ರಂದು ಬೆಳಿಗ್ಗೆ 11.40ಕ್ಕೆ ಮಂಗಳೂರಿನಿಂದ ಹೊರಟು ನವೆಂಬರ್‌ 12 ರಂದು ಮಧ್ಯರಾತ್ರಿ 12.50ಕ್ಕೆ ಮೈಸೂರು ತಲುಪಲಿದೆ. ಈ ರೈಲು ಬಂಟ್ವಾಳ, ಕಬಕಪುತ್ತೂರು, ಸುಬ್ರಹ್ಮಣ್ಯ ರಸ್ತೆ, ಸಕಲೇಶಪಟ್ಟಣ, ಹಾಸನ, ಶ್ರವಣಬೆಳಗೊಳ, ಕುಣಿಗಲ್, ನೆಲಮಂಗಲ, ಚಿಕ್ಕಬಾಣಾವರ, ಯಶವಂತಪುರ, ಕೆಎಸ್‌ಆರ್ ಬೆಂಗಳೂರು, ಕೆಂಗೇರಿ ಮತ್ತು ಮಂಡ್ಯದಲ್ಲಿ ನಿಲುಗಡೆಯಾಗಲಿದೆ.

- Advertisement -
spot_img

Latest News

error: Content is protected !!