Sunday, May 5, 2024
Homeಕರಾವಳಿಮಂಗಳೂರು:ಕದ್ರಿ ದೇವಸ್ಥಾನದ ಜಾತ್ರೆಯಲ್ಲಿ ಅನ್ಯಧರ್ಮೀಯರಿಗೆ ವ್ಯಾಪಾರ ನಿಷೇಧಿಸಿ ಬ್ಯಾನರ್ ಹಾಕಿದ ಪ್ರಕರಣ; ಬ್ಯಾನರ್ ತೆರವುಗೊಳಿಸಿದ ಪೊಲೀಸರು

ಮಂಗಳೂರು:ಕದ್ರಿ ದೇವಸ್ಥಾನದ ಜಾತ್ರೆಯಲ್ಲಿ ಅನ್ಯಧರ್ಮೀಯರಿಗೆ ವ್ಯಾಪಾರ ನಿಷೇಧಿಸಿ ಬ್ಯಾನರ್ ಹಾಕಿದ ಪ್ರಕರಣ; ಬ್ಯಾನರ್ ತೆರವುಗೊಳಿಸಿದ ಪೊಲೀಸರು

spot_img
- Advertisement -
- Advertisement -

ಮಂಗಳೂರು: ಕದ್ರಿ ಶ್ರೀ ಮಂಜುನಾಥ ದೇವಸ್ಥಾನದ ಜಾತ್ರೆಯಲ್ಲಿ ಅನ್ಯ ಧರ್ಮೀಯರಿಗೆ ವ್ಯಾಪಾರ ಮಾಡುವುದಕ್ಕೆ ಅವಕಾಶವಿಲ್ಲ ಎಂದು ವಿಹಿಂಪ-ಬಜರಂಗದಳ ವತಿಯಿಂದ ಬ್ಯಾನರ್ ಹಾಕಲಾಗಿತ್ತು. ಅದನ್ನು ಪೊಲೀಸರು ಗುರುವಾರ ತೆರವುಗೊಳಿಸಿದ್ದಾರೆ.

ಜನವರಿ 15ರಿಂದ 21ರ ವರೆಗೆ ಜಾತ್ರೆ ನಡೆಯಲಿದೆ. ಈ ನಡುವೆ ಗುರುವಾರ ಕ್ಷೇತ್ರದಲ್ಲಿ ಬ್ಯಾನರ್‌ ಕಂಡು ಬಂದಿದೆ. ಅದರಲ್ಲಿ ಕುಕ್ಕರ್‌ ಬಾಂಬ್‌ ಸ್ಫೋಟವನ್ನೂ ಉಲ್ಲೇಖ ಮಾಡಲಾಗಿತ್ತು. ಸ್ಫೋಟದ ಆರೋಪಿ ಮೊದಲು ಗುರಿ ಮಾಡಿದ್ದೇ ಕದ್ರಿ ಮಂಜುನಾಥ ದೇವಸ್ಥಾನವನ್ನು. ಅಂತಹ ಮನಸ್ಥಿತಿ ಉಳ್ಳವರಿಗೆ ಹಾಗೂ ವಿಗ್ರಹಾರಾಧನೆ ಹರಾಮ್‌ ಎಂದು ನಂಬಿರುವ ಯಾರಿಗೂ ಈ ಜಾತ್ರೆಯಲ್ಲಿ ವ್ಯಾಪಾರಕ್ಕೆ ಅವಕಾಶವಿಲ್ಲ. ಸನಾತನ ಧರ್ಮದ ಆಚರಣೆ ಹಾಗೂ ನಂಬಿಕೆಯಲ್ಲಿ ವಿಶ್ವಾಸವುಳ್ಳ ಹಿಂದೂ ವ್ಯಾಪಾರಿಗಳಿಗೆ ಮಾತ್ರ ಅವಕಾಶ ಎಂದು ಬರೆಯಲಾಗಿತ್ತು.

ಧಾರ್ಮಿಕ ದತ್ತಿ ಇಲಾಖೆಗೆ ಸೇರಿದ ದೇವಸ್ಥಾನವಾಗಿರುವುದರಿಂದ ಆಡಳಿತ ಮಂಡಳಿ ಈ ಬ್ಯಾನರ್‌ ಅಳವಡಿಕೆಗೆ ಸಮ್ಮತಿ ಸೂಚಿಸಿಲ್ಲ. ಹೀಗಾಗಿ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಪೊಲೀಸರು ಬ್ಯಾನರ್‌ ತೆರವುಗೊಳಿಸಿದ್ದಾರೆ. ಈ ಕುರಿತಂತೆ ಯಾವುದೇ ದೂರು ದಾಖಲಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -
spot_img

Latest News

error: Content is protected !!