- Advertisement -
- Advertisement -
ಬಂಟ್ವಾಳ : : ಮಕ್ಕಳನ್ನು ರಸ್ತೆ ದಾಟಿಸಿ ಬರುತ್ತಿದ್ದಾಗ ಬಸ್ ಢಿಕ್ಕಿಯಾಗಿ ಆಟೋ ಚಾಲಕ ಸಾವನ್ನಪ್ಪಿರುವ ಘಟನೆ ಫರಂಗಿಪೇಟೆಯ ಹತ್ತನೇ ಮೈಲ್ಕಲ್ಲು ನಡೆದಿದೆ.
ಅಮೆಮ್ಮಾರ್ ನಿವಾಸಿ ಪ್ರಸ್ತುತ ಹತ್ತನೇ ಮೈಲ್ ಕಲ್ಲು ಫ್ಲಾಟ್ ನಲ್ಲಿರುವ ಝಾಹಿದ್ (28) ಮೃತ ಆಟೋ ಚಾಲಕ.
ರಸ್ತೆ ದಾಟಲು ಹೆದರುತ್ತಿದ್ದ ಮಕ್ಕಳನ್ನು ರಸ್ತೆ ದಾಟಿಸಿ ಹಿಂದಿರುಗುವಷ್ಟರಲ್ಲಿ ಮಂಗಳೂರಿನಿಂದ ಬರುತ್ತಿದ್ದ, ಕೆಎಸ್ಸಾರ್ಟಿಸಿ ಬಸ್ ಢಿಕ್ಕಿಯಾಗಿ ಝಾಹಿದ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮೃತ ಯುವಕನ ತಂದೆ ಈ ಹಿಂದೆಯೇ ತೀರಿಹೋಗಿದ್ದು, ತಾಯಿ ಹಾಗೂ ಮೂರು ಸಹೋದರರು ಇಬ್ಬರು ಸಹೋದರಿಯರನ್ನು ಅಗಲಿದ್ದಾರೆ.
- Advertisement -