Monday, June 29, 2026
Homeಕರಾವಳಿಮಂಗಳೂರುಬಂಟ್ವಾಳ; ರೌಡಿಶೀಟರ್ ಯತೀಶ್ ಗಡಿಪಾರಿಗೆ ನೋಟಿಸ್ ಜಾರಿ

ಬಂಟ್ವಾಳ; ರೌಡಿಶೀಟರ್ ಯತೀಶ್ ಗಡಿಪಾರಿಗೆ ನೋಟಿಸ್ ಜಾರಿ

- Advertisement -
- Advertisement -

ಬಂಟ್ವಾಳ ತಾಲೂಕಿನ ಪೆರುವಾಯಿ ಗ್ರಾಮದ ರೌಡಿಶೀಟರ್ ಯತೀಶ್ ಎ. ಎಂಬಾತನ ಗಡಿಪಾರಿಗೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕರು ಹಾಗೂ ವಿಶೇಷ ಕಾರ್ಯನಿರ್ವಾಹಕ ದಂಡಾಧಿಕಾರಿಗಳಾಗಿರುವ ಡಾ. ಅರುಣ್ ಕೆ ಅವರು ಈ ನೋಟಿಸ್ ಜಾರಿಗೊಳಿಸಿದ್ದು, ಜುಲೈ 15ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ.

ಪೊಲೀಸ್ ಠಾಣೆಯ “ಎ” ರೌಡಿ ಶೀಟರ್ ಆಗಿರುವ ಈತನ ಮೇಲೆ, ಸಾಮಾಜಿಕ ಜಾಲತಾಣಗಳಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆ ತರುವಂತಹ ಪೋಸ್ಟ್‌ಗಳನ್ನು ಹಾಕಿ ಧರ್ಮಗಳ ನಡುವೆ ಗಲಭೆ ಸೃಷ್ಟಿಸಲು ಯತ್ನಿಸುತ್ತಿರುವ ಗಂಭೀರ ಆರೋಪವಿದೆ. ಸಾರ್ವಜನಿಕ ಆಸ್ತಿ-ಪಾಸ್ತಿಗೆ ನಷ್ಟ ಉಂಟುಮಾಡುವ ಹಾಗೂ ಶಾಂತಿ ಕದಡುವ ಸಾಧ್ಯತೆ ಇರುವುದರಿಂದ, ಮುಂಜಾಗ್ರತಾ ಕ್ರಮವಾಗಿ ಕರ್ನಾಟಕ ಪೊಲೀಸ್ ಕಾಯ್ದೆ ಕಲಂ 55(ಎ) ಮತ್ತು 55(ಬಿ) ಅಡಿಯಲ್ಲಿ ಈತನನ್ನು ಜಿಲ್ಲೆಯಿಂದ ನಿರ್ದಿಷ್ಟ ಅವಧಿಗೆ ಗಡಿಪಾರು ಮಾಡುವ ಪ್ರಕ್ರಿಯೆ ಆರಂಭಿಸಲಾಗಿದೆ. ಈ ಎಲ್ಲಾ ಆರೋಪಗಳಿಗೆ ಸಂಬಂಧಿಸಿದಂತೆ ಮುಂಬರುವ 15-07-2026 ರಂದು ನ್ಯಾಯಾಲಯಕ್ಕೆ ಖುದ್ದಾಗಿ ಹಾಜರಾಗಿ ಲಿಖಿತ ವಿವರಣೆ ಅಥವಾ ತಕರಾರು ಸಲ್ಲಿಸುವಂತೆ ಜಿಲ್ಲಾ ಪೊಲೀಸ್ ಅಧೀಕ್ಷಕರು (ಎಸ್‌ಪಿ) ತಮ್ಮ ನೋಟಿಸ್‌ನಲ್ಲಿ ಖಡಾಖಂಡಿತವಾಗಿ ಆದೇಶಿಸಿದ್ದಾರೆ.

ಇನ್ನು ಆರೋಪಿ ಯತೀಶ್ ವಿರುದ್ಧ ಈ ಹಿಂದೆ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಟ್ಟು 4 ಪ್ರಕರಣಗಳು ದಾಖಲಾಗಿದ್ದವು. ಈ ಪೈಕಿ 2 ಪ್ರಕರಣಗಳಲ್ಲಿ ಸಾಕ್ಷಿದಾರರು ಭಯದ ಕಾರಣದಿಂದ ಸಾಕ್ಷಿ ಹೇಳದಿದ್ದರಿಂದ ಆರೋಪಿ ಖುಲಾಸೆಯಾಗಿದ್ದನು. ಇನ್ನುಳಿದ ಪ್ರಕರಣಗಳಲ್ಲಿ ಒಂದು ಸದ್ಯ ವಿಚಾರಣೆಯಲ್ಲಿದ್ದು, ಮತ್ತೊಂದು ಅಂತಿಮ ವರದಿಯೊಂದಿಗೆ ಮುಕ್ತಾಯಗೊಂಡಿದೆ.

- Advertisement -

Latest News

error: Content is protected !!