Saturday, May 18, 2024
Homeಕರಾವಳಿಬಂಟ್ವಾಳ: ಬಾಯಿಹುಣ್ಣಿಗೆ ಔಷಧಿ ಬದಲು ಸಿರಪ್ ಬಾಟಲಿಯಲ್ಲಿದ್ದ ಕಳೆನಾಶಕ ಕುಡಿದು ಗ್ರಾ.ಪಂ.ಚುನಾವಣಾ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ...

ಬಂಟ್ವಾಳ: ಬಾಯಿಹುಣ್ಣಿಗೆ ಔಷಧಿ ಬದಲು ಸಿರಪ್ ಬಾಟಲಿಯಲ್ಲಿದ್ದ ಕಳೆನಾಶಕ ಕುಡಿದು ಗ್ರಾ.ಪಂ.ಚುನಾವಣಾ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಸಾವು

spot_img
- Advertisement -
- Advertisement -

ಪುಂಜಾಲಕಟ್ಟೆ: ಬಾಯಿಹುಣ್ಣಿಗೆಂದು ತೆಗೆದುಕೊಳ್ಳುತ್ತಿದ್ದ ಔಷಧಿಯ ಬದಲು ಕಳೆನಾಶಕ ಔಷಧವನ್ನು ತಪ್ಪಾಗಿ ಸೇವಿಸಿದ್ದ ವ್ಯಕ್ತಿಯೋರ್ವರು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಘಟನೆ ಇಂದು ಸಂಭವಿಸಿದೆ.

ಬಂಟ್ವಾಳ ತಾ.ನ ಕಾವಳಮೂಡೂರು ಗ್ರಾಮ ಪಂಚಾಯತ್ ನ ನಿಕಟಪೂರ್ವ ಸದಸ್ಯ, ಹಾಲಿ ಅಭ್ಯರ್ಥಿ, ಅರ್ಗತ್ಯಾರು ನಿವಾಸಿ ಜಯಂತ ಪ್ರಭು(58) ಮೃತಪಟ್ಟ ದುರ್ದೈವಿ.

ಡಿ. 21 ರಂದು ರಾತ್ರಿ 11 ಗಂಟೆ ಸುಮಾರಿಗೆ ತನ್ನ ಬಾಯಿ ಹುಣ್ಣಿಗೆಂದು ತೆಗೆದುಕೊಳ್ಳುತ್ತಿದ್ದ ಔಷಧಿಯ ಬದಲಾಗಿ ಖಾಲಿಯಾಗಿದ್ದ ಔಷಧಿ ಬಾಟಲಿಯಲ್ಲಿ ಶೇಖರಿಸಿಟ್ಟಿದ್ದ ಹುಲ್ಲಿಗೆ ಸಿಂಪಡಣೆ ಮಾಡುವ ಕಳೆನಾಶಕ ಔಷಧಿ ಟ್ರೈಕಾಟ್ ನ ಸಿರಪ್ ಎಂದು ತಪ್ಪಾಗಿ ಭಾವಿಸಿ ಅಲ್ಪ ಪ್ರಮಾಣದಲ್ಲಿ ಸೇವಿಸಿದ್ದರು. ಮರುದಿನ ಗ್ರಾ.ಪಂ. ಚುನಾವಣೆಯಲ್ಲಿ ಮತದಾನವನ್ನು ಮಾಡಿದ್ದರಲ್ಲದೆ ಮತಗಟ್ಟೆಯಲ್ಲೂ ಒಂದಷ್ಟು ಹೊತ್ತು ಕಳೆದು ಕೊನೆಕ್ಷಣದ ಮತದಾರನ ಮನವೊಲಿಸುವಲ್ಲಿಯೂ ತೊಡಗಿದ್ದರು. ಬಳಿಕ ರಾತ್ರಿ ವೇಳೆಗೆ ದಿಢೀರ್ ಅಸ್ವಸ್ಥರಾಗಿದ್ದರೆನ್ನಲಾಗಿದ್ದು ತತ್‌ಕ್ಷಣ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲಿಸಲಾಗಿತ್ತು.

ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ವೆನ್ಲಾಕ್ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಅವರು ಇಂದು ಕೊನೆಯುಸಿರೆಳೆದಿದ್ದಾರೆ. ಮೃತರು ಪತ್ನಿ, ಪುತ್ರನನ್ನು ಅಗಲಿದ್ದಾರೆ.

ಪಂಚಾಯತ್ ಚುನಾವಣೆಯ ಅಭ್ಯರ್ಥಿ:
ಮೃತ ಜಯಂತ ಪ್ರಭು ಅವರು ಡಿ. 22 ರಂದು ನಡೆದ ಗ್ರಾ.ಪಂ. ಚುನಾವಣೆಗೆ ಕಾವಳಮೂಡೂರು ಪಂಚಾಯತ್‌ನ ವಾರ್ಡ್ 3ರಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿದ್ದರು. ಅವರು ಈ ಹಿಂದೆ ಎರಡು ಬಾರಿ ಸದಸ್ಯರಾಗಿದ್ದು,ಒಂದು ಬಾರಿ ಗ್ರಾ.ಪಂ. ನ ಉಪಾಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದರು. ಪ್ರಗತಿಪರಕೃಷಿಕರಾಗಿದ್ದ ಅವರು ಸಾಮಾಜಿಕ, ಧಾರ್ಮಿಕ,ಸಹಕಾರಿ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದರು. ನೆಲ್ಲಿಗುಡ್ಡೆ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ,ನೆಲ್ಲಿಗುಡ್ಡೆ ಹಾಲು ಉತ್ಪಾದಕರ ಸಹಕಾರಿ ಸಂಘದ ನಿರ್ದೇಶಕರಾಗಿದ್ದಾರೆ.

- Advertisement -
spot_img

Latest News

error: Content is protected !!