Tuesday, May 14, 2024
Homeಕರಾವಳಿಬಂಟ್ವಾಳ:ಅಕ್ರಮವಾಗಿ ಗೋಸಾಗಾಟ ಮಾಡುತ್ತಿದ್ದಾತನ ಬಂಧನ

ಬಂಟ್ವಾಳ:ಅಕ್ರಮವಾಗಿ ಗೋಸಾಗಾಟ ಮಾಡುತ್ತಿದ್ದಾತನ ಬಂಧನ

spot_img
- Advertisement -
- Advertisement -

ಬಂಟ್ವಾಳ: ಪಿಕಪ್ ವಾಹನದಲ್ಲಿ ಅಕ್ರಮವಾಗಿ ಗೋಸಾಗಾಟ ಮಾಡುತ್ತಿದ್ದಾತನನ್ನುತಡೆದ ಪೊಲೀಸರು ಆತನನ್ನು  ಬಂಧಿಸಿ ಜಾನುವಾರುಗಳನ್ನು ರಕ್ಷಿಸಿರುವ ಘಟನೆ ಬಿ.ಸಿ.ರೋಡ್ ನ ನಾರಾಯಣಗುರು ವೃತ್ತದ ಸಮೀಪ ನಡೆದಿದೆ.

ಕಾರಾಜೆಯ ಪ್ರದೀಪ್ ಸಿಕ್ವೇರ ಎಂಬಾತ ಪಿಕಪ್ ನಲ್ಲಿ ಎರಡು ಜಾನುವಾರುಗಳನ್ನು ಯಾವುದೇ ದಾಖಲೆಗಳಿಲ್ಲದೆ ಅಕ್ರಮವಾಗಿ ಸಾಗಿಸುತ್ತಿದ್ದ ಬಗ್ಗೆ  ಪೊಲೀಸರಿಗೆ ಬಂದ ಮಾಹಿತಿಯಂತೆ ಪೊಲೀಸರು ಬಿ.ಸಿ.ರೋಡ್ ನ ನಾರಾಯಣಗುರು ವೃತ್ತದ ಸಮೀಪ ವಾಹನ ತಡೆದಿದ್ದಾರೆ.ಅದರಂತೆ ವಾಹನ ಹಾಗೂ ಪ್ರದೀಪ್ ನನ್ನು ವಶಕ್ಕೆ ಪಡೆದು ಜಾನುವಾರುಗಳನ್ನು ರಕ್ಷಿಸಿದ್ದಾರೆ.

ಕಾರ್ಯಾಚರಣೆಯಲ್ಲಿ ಬಂಟ್ವಾಳ ಪೊಲೀಸ್ ಉಪಾಧೀಕ್ಷಕರ ಸೂಚನೆಯಂತೆ ಉಪನಿರೀಕ್ಷಕರಾದ ರಾಮಕೃಷ್ಣ, ಎಚ್.ಸಿ.ಗಳಾದ ಮನೋಹರ, ಜಯಕುಮಾರ್, ಪಿಸಿಗಳಾದ ಜಮೀರ್ ಮತ್ತು ರಂಗನಾಥ ಭಾಗವಹಿಸಿದ್ದರು.

- Advertisement -
spot_img

Latest News

error: Content is protected !!