- Advertisement -
- Advertisement -
ಬಂಟ್ವಾಳ: ಪಿಕಪ್ ವಾಹನದಲ್ಲಿ ಅಕ್ರಮವಾಗಿ ಗೋಸಾಗಾಟ ಮಾಡುತ್ತಿದ್ದಾತನನ್ನುತಡೆದ ಪೊಲೀಸರು ಆತನನ್ನು ಬಂಧಿಸಿ ಜಾನುವಾರುಗಳನ್ನು ರಕ್ಷಿಸಿರುವ ಘಟನೆ ಬಿ.ಸಿ.ರೋಡ್ ನ ನಾರಾಯಣಗುರು ವೃತ್ತದ ಸಮೀಪ ನಡೆದಿದೆ.
ಕಾರಾಜೆಯ ಪ್ರದೀಪ್ ಸಿಕ್ವೇರ ಎಂಬಾತ ಪಿಕಪ್ ನಲ್ಲಿ ಎರಡು ಜಾನುವಾರುಗಳನ್ನು ಯಾವುದೇ ದಾಖಲೆಗಳಿಲ್ಲದೆ ಅಕ್ರಮವಾಗಿ ಸಾಗಿಸುತ್ತಿದ್ದ ಬಗ್ಗೆ ಪೊಲೀಸರಿಗೆ ಬಂದ ಮಾಹಿತಿಯಂತೆ ಪೊಲೀಸರು ಬಿ.ಸಿ.ರೋಡ್ ನ ನಾರಾಯಣಗುರು ವೃತ್ತದ ಸಮೀಪ ವಾಹನ ತಡೆದಿದ್ದಾರೆ.ಅದರಂತೆ ವಾಹನ ಹಾಗೂ ಪ್ರದೀಪ್ ನನ್ನು ವಶಕ್ಕೆ ಪಡೆದು ಜಾನುವಾರುಗಳನ್ನು ರಕ್ಷಿಸಿದ್ದಾರೆ.
ಕಾರ್ಯಾಚರಣೆಯಲ್ಲಿ ಬಂಟ್ವಾಳ ಪೊಲೀಸ್ ಉಪಾಧೀಕ್ಷಕರ ಸೂಚನೆಯಂತೆ ಉಪನಿರೀಕ್ಷಕರಾದ ರಾಮಕೃಷ್ಣ, ಎಚ್.ಸಿ.ಗಳಾದ ಮನೋಹರ, ಜಯಕುಮಾರ್, ಪಿಸಿಗಳಾದ ಜಮೀರ್ ಮತ್ತು ರಂಗನಾಥ ಭಾಗವಹಿಸಿದ್ದರು.
- Advertisement -