ಬಂಟ್ವಾಳ:ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಕೆಳಗಿನ ಪೇಟೆಯ ನಿವಾಸಿ ಕೊರೊನಾದಿಂದ ಮೃತಪಟ್ಟ ಮಹಿಳೆ ಚಿಕಿತ್ಸೆ ಪಡೆದಿದ್ದ ಮಂಗಳೂರಿನ ಖಾಸಗಿ ಆಸ್ಪತ್ರೆಯ 48 ವರ್ಷದ ಸ್ವಚ್ಛತಾ ಸಿಬ್ಬಂದಿ ಮಹಿಳೆಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ.ಈ ದಿನದ ಕರ್ನಾಟಕದ ಏಕೈಕ ಪ್ರಕರಣ ಇದಾಗಿದೆ.ಮಂಗಳೂರಿನ ಫಸ್ಟ್ ನ್ಯೂರೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಂಟ್ವಾಳದ ವೃದ್ಧೆ ಎ.21ರಂದು ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದು ವೃದ್ದೆಯ ಸಂಪರ್ಕದಿಂದ ಸ್ವಚ್ಛತಾ ಕೆಲಸ ಮಾಡುತ್ತಿದ್ದ ಬಂಟ್ವಾಳ ತಾಲೂಕಿನ ನರಿಕೊಂಬು ಗ್ರಾಮದ ಮಹಿಳೆಗೆ ಸೋಂಕು ಇರುವುದು ದೃಢಪಟ್ಟಿದೆ.
ವೃದ್ಧೆ ಮೃತಪಟ್ಟ ನಂತರ ಆಸ್ಪತ್ರೆ ಸಿಬ್ಬಂದಿಯನ್ನು ಮಂಗಳೂರಿನಲ್ಲಿ ಕ್ವಾರಂಟೈನ್ನಲ್ಲಿ ಇರಿಸಲಾಗಿದ್ದು ಗಂಟಲ ದ್ರವದ ಮಾದರಿ ವರದಿ ಬಂದ ಬಳಿಕ ಕೊರೊನಾ ಇರುವುದು ದೃಢಪಟ್ಟಿದೆ.
ಇದೀಗ ದ.ಕ ಜಿಲ್ಲೆಯಲ್ಲಿ 19 ಕೊರೊನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು ಇಬ್ಬರು ಮೃತಪಟ್ಟಿದ್ದಾರೆ. 12 ಮಂದಿ ಗುಣಮುಖರಾಗಿದ್ದು 5 ಮಂದಿಗೆ ಮಂಗಳೂರಿನ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ .
ಕರ್ನಾಟಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 501 ಕ್ಕೆ ಏರಿಕೆಯಾಗಿದ್ದು, ದ.ಕ.ಜಿಲ್ಲೆಯ ಒಬ್ಬರಿಗೆ ಮಾತ್ರ ಇಂದು ಸೋಂಕು ಇರುವುದು ದೃಢಪಟ್ಟಿದೆ.
ಬಂಟ್ವಾಳಕ್ಕೆ ಇನ್ನೊಂದು ಆಘಾತ : ಕೊರೊನ ಹೊಸ ಪ್ರಕರಣ ಪತ್ತೆ
- Advertisement -
- Advertisement -
- Advertisement -
