- Advertisement -
- Advertisement -
ಮಂಗಳೂರು:ಬಿಜೆಪಿ ವಿಜಯೋತ್ಸವ ಮೆರವಣಿಗೆ ಬಳಿಕ ಇಬ್ಬರಿಗೆ ಚೂರಿಯಿಂದ ಇರಿದಿರುವ ಘಟನೆ ಬಂಟ್ವಾಳ ತಾಲೂಕಿನ ಬೋಳಿಯಾರು ಎಂಬಲ್ಲಿ ನಡೆದಿದೆ.ಬೋಳಿಯಾರು ನಿವಾಸಿಗಳಾದ ಸುರೇಶ್ ಹಾಗೂ ನಂದ ಕುಮಾರ್ ಗೆ ದುಷ್ಕರ್ಮಿಗಳು ಚೂರಿಯಿಂದ ಇರಿದಿದ್ದಾರೆ.
ಮೋದಿ ಪದಗ್ರಹಣ ಹಿನ್ನೆಲೆಯಲ್ಲಿ ಬೋಳಿಯಾರ್ ನಲ್ಲಿ ಬಿಜೆಪಿ ವಿಜಯೋತ್ಸವ ಆಯೋಜಿಸಿತ್ತು. ಈ ಹಿನ್ನೆಲೆ ವಿಜಯೋತ್ಸವ ಮುಗಿಸಿ ಬೋಳಿಯಾರು ಪೇಟೆಯಲ್ಲಿ ಯುವಕರು ನಿಂತಿದ್ದರು. ಇದೇ ವೇಳೆ ಅಪರಿಚಿತ ದುಷ್ಕರ್ಮಿಗಳ ತಂಡ ಏಕಾಏಕಿ ಚೂರಿ ಇರಿದಿದೆ. ಸದ್ಯ ಇಬ್ಬರಿಗೂ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
- Advertisement -