Sunday, May 19, 2024
Homeಕರಾವಳಿಬೆಳ್ತಂಗಡಿ: ಬಾರ್ಯ ಗ್ರಾ.ಪಂ ಭಾರಿ ಅವ್ಯವಹಾರ, ಜಿಲ್ಲಾ ಪಂಚಾಯತ್ ಅಧಿಕಾರಿಗಳಿಂದ ತನಿಖೆ

ಬೆಳ್ತಂಗಡಿ: ಬಾರ್ಯ ಗ್ರಾ.ಪಂ ಭಾರಿ ಅವ್ಯವಹಾರ, ಜಿಲ್ಲಾ ಪಂಚಾಯತ್ ಅಧಿಕಾರಿಗಳಿಂದ ತನಿಖೆ

spot_img
- Advertisement -
- Advertisement -

ಬಾರ್ಯ : ಬೆಳ್ತಂಗಡಿ ತಾಲೂಕಿನ ಬಾರ್ಯ ಗ್ರಾ.ಪಂ. ರಶೀದಿ ಪುಸ್ತಕಗಳನ್ನು ದುರುಪಯೋಗ ಪಡಿಸಿಕೊಂಡು ಅವ್ಯವಹಾರ ನಡೆಸಿರುವ ಪ್ರಕರಣ ಸಂಬಂಧ ಇಂದು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಅಧಿಕಾರಿಗಳು ತನಿಖೆ ನಡೆಸಿದರು.
ಬಾರ್ಯ ಗ್ರಾಮ ಪಂಚಾಯತ್​ನಲ್ಲಿ 2017-18ರ ಸಾಲಿನಲ್ಲಿ ರಶೀದಿ ಪುಸ್ತಕಗಳನ್ನು ದುರುಪಯೋಗ ಪಡಿಸಿಕೊಂಡು ಅವ್ಯವಹಾರ ನಡೆಸಿರುವ ಪ್ರಕರಣದ ಸಂಬಂಧ ತನಿಖೆ ನಡೆಸಿರುವ ದ.ಕ. ಜಿಲ್ಲಾ ಪಂಚಾಯತ್​ ಅಧಿಕಾರಿಗಳು, ಪಿಡಿಒ ಸಹಿತ 6 ಮಂದಿ ಸಿಬ್ಬಂದಿಯನ್ನು ತಪ್ಪಿತಸ್ಥರೆಂದು ಘೋಷಿಸಿದ್ದಾರೆ. ಅಲ್ಲದೆ ಈಗಾಗಲೇ ನಡೆದಿರುವ 10,92,108 ರೂ. ಅವ್ಯವಹಾರದ ಹಣವನ್ನು ಪಾವತಿಸಲಾಗಿದ್ದು, ಅದರ ಶೇ.15 ಬಡ್ಡಿ ಹಣ 4,55,861 ರೂ. ಪಾವತಿ ಮಾಡುವಂತೆ ಆದೇಶಿಸಿದ್ದಾರೆ.2016-17 ಮತ್ತು 2017-18ನೇ ಲೆಕ್ಕ ಪರಿಶೋಧನೆಯಲ್ಲಿ ಗ್ರಾ.ಪಂಚಾಯಿತಿಯ ರಶೀದಿ ಪುಸ್ತಕಗಳನ್ನು ದುರುಪಯೋಗ ಪಡಿಸಿ ನೀರಿನ ಬಿಲ್ ವಸೂಲಿಯಲ್ಲಿ ಕ್ರಮವಾಗಿ 6,92,377 ರೂ. ಮತ್ತು 3,99,731 ಸೇರಿದಂತೆ ಒಟ್ಟು 10,92,108 ರಷ್ಟು ಮೊತ್ತವನ್ನು ಬ್ಯಾಂಕಿನಲ್ಲಿರುವ ಸಂಬಂಧಿಸಿದ ಖಾತೆಗೆ ಜಮೆ ಆಗದಿರುವುದು ಕಂಡು ಬಂದಿದ್ದು, ಈ ಹಣವನ್ನು ವಸೂಲಿ ಮಾಡಿ ನೀರಿನ ಖಾತೆಗೆ ಜಮೆ ಮಾಡಲು ಆದೇಶಿಸಲಾಗಿತ್ತು.ಅದರಂತೆ ಈ ಹಣವನ್ನು 10 ಕಂತುಗಳಲ್ಲಿ ಪಾವತಿ ಮಾಡಲಾಗಿದೆ. ಆದರೆ ದುರುಪಯೋಗಪಡಿಸಿದ ಮೊತ್ತಕ್ಕೆ ಶೇ.15ರಷ್ಟು ಬಡ್ಡಿಯನ್ನು ಸಂಬಂಧಪಟ್ಟ ಅಭಿವೃದ್ಧಿ ಅಧಿಕಾರಿ, ಸಿಬ್ಬಂದಿಯಿಂದ ವಸೂಲಿ ಮಾಡಿ ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿಗೆ ಸೂಚನೆ ನೀಡಲಾಗಿದೆ.ಈ ಬಗ್ಗೆ ಬೆಳ್ತಂಗಡಿ ತಾಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಗ್ರಾಮ ಪಂಚಾಯತ್ ನ ಅಂದಿನ ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಪ್ರಸ್ತಕ ಚೆನ್ನರಾಯಪಟ್ಟಣ ಜುಟ್ಟನಹಳ್ಳಿ ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಹೆಚ್.ಡಿ. ದೇವರಾಜ್, ಬಾರ್ಯ ಗ್ರಾ.ಪಂ ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಮಂಜು, ಗುಮಾಸ್ತೆ ಪ್ರಮೀಳ, ತೆರಿಗೆ ಸಂಗ್ರಹಕ ಸಂಜೀವ, ನಲ್ಲಿ ನೀರಿನ ಬಿಲ್​ ಕಲೆಕ್ಟರ್ ಮಾಧವ ಮತ್ತು ಗ್ರಾ.ಪಂ ಜವಾನ ಕುಶಾಲಪ್ಪ ಇವರಿಗೆ ನೋಟಿಸ್ ಜಾರಿ ಮಾಡಿ 4.55 ಲಕ್ಷ ರೂ. ಮರು ಪಾವತಿ ಮಾಡುವಂತೆ ಆದೇಶಿಸಲಾಗಿದೆ.

- Advertisement -
spot_img

Latest News

error: Content is protected !!