- Advertisement -
- Advertisement -
ಕುರ್ನಾಡು: ನಿನ್ನೆ ತಡರಾತ್ರಿಯಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ರಸ್ತೆಯ ಬದಿಯಲ್ಲಿದ್ದ ಗುಡ್ಡವೊಂದು ಕುಸಿದು ರಸ್ತೆಗೆ ಬಿದ್ದ ಕಾರಣ ಸಂಚಾರ ಬಂದ್ ಆಗಿರುವ ಘಟನೆ ಮಂಗಳೂರು ತಾಲೂಕಿನ ಕುರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಮಿತ್ತಕೋಡಿ ಎಂಬಲ್ಲಿ ನಡೆದಿದೆ.
ಬಿಸಿರೋಡಿನಿಂದ ಸಜೀಪ ಚೇಳೂರು , ಬೋಳ್ಯಾರು ಮುಡಿಪು ಮೂಲಕ ಉಳ್ಳಾಲ ಮಂಗಳೂರು ಸಂಪರ್ಕ ದ ರಸ್ತೆಯ ಬೋಳ್ಯಾರು ಸಮೀಪದ ಮಿತ್ತಕೋಡಿ ಎಂಬಲ್ಲಿ ಗುಡ್ಡ ಜರಿದು ಬಿದ್ದ ಕಾರಣದಿಂದ ಬಿಸಿರೋಡು ಉಳ್ಳಾಲ ರಸ್ತೆ ಸಂಚಾರಕ್ಕೆ ಅಡಚಣೆ ಉಂಟಾಗಿದೆ.
ಈ ಹಿನ್ನಲೆಯಲ್ಲಿ ಬಿಸಿರೋಡಿನಿಂದ ಮೆಲ್ಕಾರ್ ಬೋಳ್ಯಾರು ಮೂಲಕ ಮಂಗಳೂರು ಸಂಚಾರ ಮಾಡುವ ಬಸ್ ಹಾಗೂ ಇತರೆ ವಾಹನಗಳು ಬೋಳ್ಯಾರ್ ನಿಂದ ಕುರ್ನಾಡು ಮೂಲಕ ಮುಡಿಪುವಿಗೆ ಹೋಗಲು ಬದಲಿ ವ್ಯವಸ್ಥೆ ಮಾಡಲಾಗಿದೆ.
- Advertisement -