Monday, May 6, 2024
Homeಕರಾವಳಿಉಡುಪಿಶಿರ್ವ: ಸಂತ ಮೇರಿ ಮಹಾವಿದ್ಯಾಲಯ ಸ್ವಚ್ಛತಾ ಜನಾಂದೋಲನ- ಪುನೀತ ಸಾಗರ ಅಭಿಯಾನ

ಶಿರ್ವ: ಸಂತ ಮೇರಿ ಮಹಾವಿದ್ಯಾಲಯ ಸ್ವಚ್ಛತಾ ಜನಾಂದೋಲನ- ಪುನೀತ ಸಾಗರ ಅಭಿಯಾನ

spot_img
- Advertisement -
- Advertisement -

ಶಿರ್ವ: ನಮ್ಮ ಪರಿಸರ ಸ್ವಚ್ಛವಾಗಿದ್ದರೆ ಎಷ್ಟೋ ರೋಗಗಳನ್ನು ಮದ್ದಿಲ್ಲದೇ ದೂರವಾಗಿಸಲು ಸಾಧ್ಯ. ನಮಗೆ ಶಿಕ್ಷಣ ಎಷ್ಟು ಮುಖ್ಯ ವೋ ಅಷ್ಟೇ ಮುಖ್ಯ ಪರಿಸರ ಕಾಳಜಿ ಕೂಡ. ಇಂದು ನಮ್ಮ ಎನ್ ಸಿ ಸಿ ಘಟಕ ದ ವಿದ್ಯಾರ್ಥಿಗಳು ಕಾಪು ಬೀಚ್ ಸ್ವಚ್ಛಗೊಳಿಸುವ ಮೂಲಕ ಸರಕಾರದ ಕೆಲಸ ಮಾತ್ರವಲ್ಲ ಪ್ರಜ್ಞಾವಂತ ನಾಗರಿಕರೆಲ್ಲರ ಕತ೯ವ್ಯವೆಂದು ಸಾಬೀತು ಪಡಿಸಿದರು ಹಾಗೂ ಕಡಲ ಕಿನಾರೆಯ ವ್ಯಾಪಾರಸ್ಥರು ಸ್ವಚ್ಛತೆಯ ಬಗ್ಗೆ ತಾವೇ ಮುತುವಜಿ೯ ವಹಿಸಿ ಸ್ವಚ್ಛತೆ ಕಾಪಾಡಿಕೊಳ್ಳುವುದು ಮತ್ತು ಪ್ರವಾಸಿಗರಿಗೆ ಸ್ವಚ್ಛತೆಯ ಬಗ್ಗೆ ತಿಳುವಳಿಕೆ ಮೂಡಿಸಿದಾಗ ಸ್ವಚ್ಛ ಭಾರತದ ಕನಸು ಸಾಕಾರಗೊಳ್ಳ ಲು ಸಾಧ್ಯ ಎಂದು ಶಿವ೯ ಸಂತಮೇರಿ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ.ಹೆರಾಲ್ಡ್ ಐವನ್ ಮೊನೀಸ್ ರವರು ಬೀಚ್ ಕ್ಲೀನಿಂಗ್ ಕಾರ್ಯಕ್ರಮ ಕ್ಕೆ ಚಾಲನೆ ನೀಡಿ ಮಾತನಾಡಿದರು.

ಸ್ವಚ್ಛ ಭಾರತ-ಸ್ವಸ್ಥ ಭಾರತದ ನೆಲೆಯಲ್ಲಿ ಸ್ವಚ್ಛ- ಸುಂದರ ಸಾಗರ, 75 ನೇ ಸ್ವಾತಂತ್ರ್ಯದ ಆಜಾದಿ ಕಾ ಅಮೃತ್ ಮಹೋತ್ಸವ ಪ್ರಯುಕ್ತ ಬೀಚ್ ಕ್ಲೀನಿಂಗ್ ಕಾರ್ಯಕ್ರಮವನ್ನು ಇಲ್ಲಿನ ಸಂತ ಮೇರಿ ಮಹಾವಿದ್ಯಾಲಯದ ಎನ್ ಸಿಸಿ ಘಟಕ ಹಾಗೂ 21 ಕರ್ನಾಟಕ ಬೆಟಾಲಿಯನ್ ಎನ್ ಸಿಸಿ ಉಡುಪಿ ಸಂಯುಕ್ತವಾಗಿ ಏರ್ಪಡಿಸಿದ್ದ ಪುನೀತ ಸಾಗರ ಅಭಿಯಾನದಲ್ಲಿ ಕೇವಲ ಒಂದೆರಡು ದಿನದಲ್ಲಿ ಇಂತಹ ಕೆಲಸಗಳು ಪೂರ್ಣ ಗೊಳ್ಳ ಲು ಸಾಧ್ಯವಿಲ್ಲ ಎಂದು ತಮ್ಮ
ಅನಿಸಿಕೆ ವ್ಯಕ್ತಪಡಿಸಿದರು.

ಇಂದು ದೇಶ ಎಲ್ಲಾ ಕ್ಷೇತ್ರಗಳಲ್ಲಿ ಪ್ರಗತಿಯನ್ನು ಸಾಧಿಸುತ್ತಿದೆ ಆದರೆ ಪ್ರಜ್ಞಾವಂತ ನಾಗರಿಕರಾದ ಪ್ರಜೆಗಳು ಪರಿಸರ ಸ್ವಚ್ಛತೆಯನ್ನು ಪಾಲಿಸದೆ ಮನಬಂದಂತೆ ಪ್ಲಾಸ್ಟಿಕ್ ಮತ್ತು ತ್ಯಾಜ್ಯಗಳನ್ನು ಬಿಸಾಡಿ ಅಧಿಕ ಮಾಲಿನ್ಯವನ್ನು ಮಾತ್ರವಲ್ಲದೆ ಪ್ರಕೃತಿಯಲ್ಲಿರುವ ಪಶು-ಪಕ್ಷಿಗಳಿಗೆ, ಜಲಚರ ಹಾಗೂ ಮಾನವಕುಲಗೆ ಹಾನಿ ಉಂಟು ಮಾಡುತ್ತಿದ್ದಾರೆ. ಇದರ ಪರಿಣಾಮ ಇಂದು ಸಮುದ್ರದಲ್ಲಿಸೇರಿರುವ ವಿವಿಧ ತ್ಯಾಜ್ಯಗಳಿಂದ ಸಮುದ್ರ ಮಾಲಿನ್ಯವನ್ನು ನಾವು ನೋಡುತ್ತಿದ್ದೇವೆ ಎಂದು ಕಾಲೇಜಿನ ಎನ್ ಸಿಸಿ ಅಧಿಕಾರಿ ಲೆಫ್ಟಿನೆಂಟ್ ಕೆ. ಪ್ರವೀಣ್ ಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿ ಕಾರ್ಯಕ್ರಮಕ್ಕೆ ಮಾರ್ಗದರ್ಶನ ನೀಡಿದ್ದರು. ಕಾಪು ಬೀಚಿನಲ್ಲಿ ಸುಮಾರು 35 ಕೆಡೆಟ್ ಗಳು ಭಾಗವಹಿಸಿ 400 ಕೆಜಿ ಪ್ಲಾಸ್ಟಿಕ್ ಮತ್ತು ಕಸವನ್ನು ಸಂಗ್ರಹಿಸಿ ಕಾಪು ಪುರಸಭೆಯ ಸ್ವಚ್ಛಗೊಳಿಸುವ ಸಿಬ್ಬಂದಿ ವರ್ಗದವರಿಗೆ ಹಸ್ತಾಂತರಿಸಲಾಯಿತು ಮತ್ತು ಬೀಚ್ ಪರಿಸರವನ್ನು ಸ್ವಚ್ಛಗೊಳಿಸುವ ಮೂಲಕ ಜನಾಂದೋಲನವನ್ನು ಜಾಗೃತಿ ಮೂಡಿಸಿದರು.

ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಯಶೋಧ, ಅಂತಿಮ ವರ್ಷದ ಪದವಿ ವಿದ್ಯಾರ್ಥಿ ಸುರಕ್ಷ, ಕ್ಯಾಡೆಟ್ ಸೀನಿಯರ್ ಅಂಡರ್ ಆಫೀಸರ್ ವಿಶಾಲ್ ಎಸ್ ಮೂಲ್ಯ, ಜೂನಿಯರ್ ಅಂಡರ್ ಆಫೀಸರ್ ಹರ್ಷಿತ, ಕಂಪನಿ ಸಾರ್ಜೆಂಟ್ ಕ್ವಾಟರ್ಮಸ್ಟರ್ ಮೋಹಿತ್ ಎನ್ ಸಾಲಿಯಾನ್, ಕಾರ್ಪೊರಲ್ ಧೀರಜ್ ಆಚಾರ್ಯ, ಸಹಕರಿಸಿದರು. ಜೂನಿಯರ್ ಅಂಡರ್ ಆಫೀಸರ್ ಸುರಕ್ಷ ಸ್ವಾಗತಿಸಿ, ಲ್ಯಾನ್ಸ್ ಕಾರ್ಪೊರಲ್ ಲೋಬೋ ರಿಯಾ ನೆವಿಲ್ ಪಿಂಟೋ ವಂದಿಸಿದರು.

- Advertisement -
spot_img

Latest News

error: Content is protected !!