ಬೆಳಗಾವಿ ಲೋಕಸಭೆ ಚುನಾವಣೆಯ ಮತ ಎಣಿಕೆ ಕಾರ್ಯ ಸಂಪೂರ್ಣವಾಗಿದ್ದು, ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕೇಂದ್ರದ ಮಾಜಿ ಸಚಿವ ದಿ. ಸುರೇಶ್ ಅಂಗಡಿ ಪತ್ನಿ ಮಂಗಲಾ ಅಂಗಡಿ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಸೋಲುಂಡಿದ್ದಾರೆ.
ಆರಂಭದಿಂದಲೂ ಕ್ಲೈಮಾಕ್ಸ್ ಹಂತದವರೆಗೂ ಹಾವು ಏಣಿಯಂತಿದ್ದ ಮತ ಗಳಿಕೆ, ಕ್ಷಣಕ್ಷಣಕ್ಕೂ ರೋಚಕ ತಿರುವು ಪಡೆಯುತ್ತಲೇ ಇತ್ತು. ಅಂತಿಮವಾಗಿ ಮಂಗಲಾ 2912 ಮತಗಳ ಅಂತರದಲ್ಲಿ ಗೆದ್ದು ಬೀಗಿದ್ದಾರೆ.
ಬಿಜೆಪಿಯ ಭದ್ರಕೋಟೆಯಲ್ಲಿಯೇ ಕೇವಲ 3 ಸಾವಿರ ಮತಗಳಿಂದ ಗೆಲುವಾಗಿರುವುದು ನಾಯಕರುಗಳಿಗೆ ಕೊಂಚ ಬೇಸರ ತರಿಸಿದೆ. ಯಾಕಂದ್ರೆ ಈ ಹಿಂದೆ ಸುರೇಶ್ ಅಂಗಡಿ ಅವರು ನಾಲ್ಕು ಬಾರಿ ಗೆಲುವು ಸಾಧಿಸಿದ್ದರು.
ಕಳೆದ ಲೋಕಸಭಾ ಚುನಾವನೆಯಲ್ಲಿ ಸುರೇಶ್ ಅಂಗಡಿ ಅವರು 3 ಲಕ್ಷದ ತೊಂಭತ್ತು ಸಾವಿರುದ ಮತಗಳಿಂದ ಗೆದ್ದದ್ದರು. ಈಗ ಸುರೇಶ್ ಅಂಗಡಿ ಅವರ ಪತ್ನಿ ಮಂಗಳ ಅಂಗಡಿ ಅವರು ಕೇವಲ 3000 ಸಾವಿರ ಅಂತರದಿಂದ ಗೆಲುವಿನ ನಗೆ ಬೀರಿದ್ದಾರೆ. ಚುನಾವಣೆ ಆಯೋಗ ಅಧಿಕೃತ ಘೋಷಣೆಯೊಂದೆ ಬಾಕಿ ಇದೆ.


