ಬೆಳ್ತಂಗಡಿ : ಖಾಸಗಿ ವಿದ್ಯಾರ್ಥಿಗಳ ತಂಡ ಕಾಲೇಜು ಮುಗಿಸಿ ಏಳು ಜನರು ಸೇರಿ ಏಳುವರೇಹಳ್ಳದ ಕಲ್ಲಂಡ ಬಳಿಯ ತೋಟ್ಲಾಯಿಗುಂಡಿಗೆ ತಿರುಗಾಡಲು ಹೋಗಿದ್ದು ಈ ವೇಳೆ ಓರ್ವ ವಿದ್ಯಾರ್ಥಿ ನೀರಿನ ಸೆಳೆತಕ್ಕೆ ಸಿಲುಕಿ ಮೃತಪಟ್ಟಿದ್ದಾನೆ.
ಬೆಳ್ತಂಗಡಿ ತಾಲೂಕಿನ ಮಲವಂತಿಗೆ ಗ್ರಾಮದ ಏಳುವರೇಹಳ್ಳದ ಕಲ್ಲಂಡ ಬಳಿಯ ತೋಟ್ಲಾಯಿಗುಂಡಿಗೆ ಹೋಗಿದ್ದ ಉಜಿರೆ ಖಾಸಗಿ ಎರಡನೇ ವರ್ಷದ ಪಿಯುಸಿ ವಿದ್ಯಾರ್ಥಿಗಳ ಏಳು ಜನರ ತಂಡ ಶನಿವಾರ ಕಾಲೇಜು ಮುಗಿಸಿ ಮೂರು ಬೈಕ್ ನಲ್ಲಿ ತೆರಳಿದ್ದಾರೆ. ಸಂಜೆ ಸುಮಾರು ನಾಲ್ಕು ಗಂಟೆಗೆ ಓರ್ವ ವಿದ್ಯಾರ್ಥಿ ನೀರಿನಲ್ಲಿ ಈಜುತ್ತಿದ್ದ ವೇಳೆ ನೀರಿನ ಸೆಳೆತಕ್ಕೆ ಸಿಲುಕಿದ್ದಾನೆ. ಈ ವೇಳೆ ಉಳಿದವರು ಬೊಬ್ಬೆ ಹಾಕಿದಾಗ ಸ್ಥಳೀಯರೊಬ್ಬರು ಬಂದು ನೀರಿನಲ್ಲಿ ಹುಡುಕಾಟ ನಡೆಸಿ ಕೊನೆಗೆ ಯುವಕನನ್ನು ನೀರಿನಿಂದ ರಕ್ಷಣೆ ಮಾಡಿ ತಕ್ಷಣ ಜೀಪಿನಲ್ಲಿ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಕರೆತಂದಿದ್ದಾರೆ. ಈ ವೇಳೆ ವೈದ್ಯರು ಪರೀಕ್ಷಿಸಿದಾಗ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.
ಧರ್ಮಸ್ಥಳ ಗ್ರಾಮದ ದೊಂಡೆಲೆಯ ನೇತ್ರಾನಗರದ ನಿವಾಸಿ ಕೇಶವ ಭಂಡಾರಿ ಮತ್ತು ಸುಮಿತ್ರಾ ದಂಪತಿಯ ಎರಡನೇ ಮಗನಾದ ವಿವೇಕ್ ಭಂಡಾರಿ(17) ಮೃತಪಟ್ಟ ವಿದ್ಯಾರ್ಥಿಯಾಗಿದ್ದಾನೆ. ಶವವನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಯ ಶವಗಾರದಲ್ಲಿ ಇರಿಸಲಾಗಿದ್ದು. ಮೃತಪಟ್ಟ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.