Friday, June 27, 2025
Homeಕರಾವಳಿಬೆಳ್ತಂಗಡಿ: ಬದುಕು ಕಟ್ಟೋಣ ಬನ್ನಿ ತಂಡದಿಂದ ಪಿಲಿಗೂಡು ಸ.ಹಿ.ಪ್ರಾ.ಶಾಲೆಗೆ ಮಿಕ್ಸಿ, ಗ್ಯಾಸ್ ಸಿಲಿಂಡರ್ ಹಸ್ತಾಂತರ

ಬೆಳ್ತಂಗಡಿ: ಬದುಕು ಕಟ್ಟೋಣ ಬನ್ನಿ ತಂಡದಿಂದ ಪಿಲಿಗೂಡು ಸ.ಹಿ.ಪ್ರಾ.ಶಾಲೆಗೆ ಮಿಕ್ಸಿ, ಗ್ಯಾಸ್ ಸಿಲಿಂಡರ್ ಹಸ್ತಾಂತರ

spot_img
- Advertisement -
- Advertisement -

ಬೆಳ್ತಂಗಡಿ : ಪಿಲಿಗೂಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪಿಲಿಗೂಡಿನಿಂದ  ಜೂ.5ರ ರಾತ್ರಿ ಮಿಕ್ಸಿ, ಗ್ಯಾಸ್ ಸಿಲಿಂಡರ್ ಸೇರಿದಂತೆ ಇನ್ನಿತರ ವಸ್ತುಗಳು ಕಳವಾಗಿದ್ದು ಶಾಲೆಯಲ್ಲಿ ಮಕ್ಕಳಿಗೆ ಬಿಸಿಯೂಟ ತಯಾರಿಸಲು ಸಾಧ್ಯವಾಗದೆ ಸಮಸ್ಯೆಯಾಗಿತ್ತು.

ಶಾಲೆಯಲ್ಲಿ ಕಳ್ಳತನವಾದ ಸುದ್ದಿಯನ್ನು ಮೊದಲು ಬೆಳ್ತಂಗಡಿ ಪತ್ರಕರ್ತ ಪ್ರಸಾದ್ ಶೆಟ್ಟಿ ಏಣಿಂಜೆ ತಮ್ಮ ವೆಬ್ ಸೈಟ್ ನಲ್ಲಿ ಬಿತ್ತರಿಸಿದ್ದರು. ಈ ವರದಿಯನ್ನು ವೀಕ್ಷಿಸಿದ  ಉಜಿರೆ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ತಂಡದ ಸಂಚಾಲಕರಾದ ಮೋಹನ್ ಕುಮಾರ್ ಅವರು ಬೆಳ್ತಂಗಡಿ ಪತ್ರಕರ್ತ ಪ್ರಸಾದ್ ಶೆಟ್ಟಿ ಏಣಿಂಜೆ ಇವರಿಗೆ ನೇರವಾಗಿ ಪೋನ್ ಮೂಲಕ ಸಂಪರ್ಕಿಸಿ ಶಾಲೆಗೆ ಹೊಸದಾಗಿ ಗ್ಯಾಸ್ ಸಿಲಿಂಡರ್ ಮತ್ತು ಮಿಕ್ಸಿ ನೀಡುವುದಾಗಿ ಹೇಳಿದ್ದರು.ಯಾಕೆಂದರೆ ಶಾಲಾ ಮಕ್ಕಳಿಗೆ ಬಿಸಿಯೂಟಕ್ಕೆ ತೊಂದರೆಯಾಗಬಾರದು ಎಂಬ ನಿಟ್ಟಿನಲ್ಲಿ ತಕ್ಷಣ ಶಾಲೆಗೆ ಮಿಕ್ಸಿ ಹಾಗೂ ಗ್ಯಾಸ್ ಸಿಲಿಂಡರ್ ನೀಡಲು ಮುಂದಾಗಿದ್ದರು‌.

ಅದರಂತೆ ಜೂ 7 ರಂದು‌ ಬೆಳಗ್ಗೆ 11 ಗಂಟೆಗೆ ಲಕ್ಷ್ಮೀ ಇಂಡಸ್ಟ್ರೀಸ್ ‘ಕನಸಿನ ಮನೆ’ ಮಾಲೀಕರು ಹಾಗೂ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ (ರಿ) ಉಜಿರೆಯ ಸಂಚಾಲಕರಾದ ಮೋಹನ್ ಕುಮಾರ್ ಅವರು  ಶಾಲೆಗೆ ತೆರಳಿ ಹೊಸದಾಗಿ ಮಿಕ್ಸಿ ಹಾಗೂ ಗ್ಯಾಸ್ ಸಿಲಿಂಡರನ್ನು ಶಾಲೆಗೆ ಹಸ್ತಾಂತರ ಮಾಡಿದರು.

ಕಾರ್ಯಕ್ರಮದಲ್ಲಿ ಉಜಿರೆ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ (ರಿ) ಸಂಚಾಲಕರಾದ ಮೋಹನ್ ಕುಮಾರ್ , ಪತ್ರಕರ್ತರಾದ ಪ್ರಸಾದ್ ಶೆಟ್ಟಿ ಏಣಿಂಜೆ, ಪಿಲಿಗೂಡು ಸ.ಹಿ.ಪ್ರಾ. ಶಾಲೆಯ ಮುಖ್ಯ ಶಿಕ್ಷಕಿ ಫ್ಲೇವಿಯಾ ಡಿ’ಸೋಜಾ, ಶಿಕ್ಷಕಿಯರಾದ ಚಂದ್ರಾ.ಕೆ, ಶಿಲ್ಪಾ, ಉಷಾ , ಎಸ್.ಡಿ.ಎಮ್.ಸಿ ಅಧ್ಯಕ್ಷ ಇಸ್ಮಾಯಿಲ್ , ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ  ಭುವನೇಶ್, ಎಸ್.ಡಿ.ಎಮ್.ಸಿ ಸದಸ್ಯರಾದ ಬಾಲಕೃಷ್ಣ, ವನಿತಾ, ಪೋಷಕರು ಭಾಗವಹಿಸಿದರು.

- Advertisement -
spot_img

Latest News

error: Content is protected !!