- Advertisement -
- Advertisement -
ಬೆಳ್ತಂಗಡಿ; ಅಂಗನವಾಡಿಯಲ್ಲಿ ವಿತರಿಸಿದ ಮೊಟ್ಟೆಯನ್ನು ಬೇಯಿಸಿದಾಗ ಕೋಳಿ ಮರಿ ಪತ್ತೆಯಾದ ಅಚ್ಚರಿಯ ಘಟನೆ ಬೆಳ್ತಂಗಡಿ ತಾಲೂಕಿನ ರೆಖ್ಯ, ಅರಸಿನಮಕ್ಕಿಯಲ್ಲಿ ಬೆಳಕಿಗೆ ಬಂದಿದೆ.
ರೆಖ್ಯ ಗ್ರಾಮದ ಎಂಜಿರ-ಕಟ್ಟೆ ಅಂಗನವಾಡಿ ಕೇಂದ್ರದಿಂದ ವಿತರಣೆಯಾಗಿದ್ದ ಮೊಟ್ಟೆಯನ್ನು ಪಡೆದುಕೊಂಡಿದ್ದ ಮಗುವಿನ ಮನೆಯಲ್ಲಿ ಬೇಯಿಸಿದಾಗ, ಮೊಟ್ಟೆಯೊಳಗೆ ಹೆಪ್ಪುಗಟ್ಟಿದ ರಕ್ತ, ಅದಾಗಲೇ ಹೊರಬರಬೇಕಿದ್ದ ಮರಿ ಕಂಡು ಬಂದಿದೆ.
ಇದೇ ರೀತಿಯ ಅನೇಕ ಅನುಭವಗಳನ್ನು ಮೊಟ್ಟೆ ಪಡೆದುಕೊಂಡ ಹಲವು ಮನೆಯವರು ಹಂಚಿಕೊಂಡಿದ್ದಾರೆ ಎನ್ನಲಾಗಿದೆ. ಈ ವಿಚಾರ ಅರಸಿನಮಕ್ಕಿ ಗ್ರಾ.ಪಂ ನ ವಾರ್ಡ್ ಸಭೆಯಲ್ಲಿ ಪ್ರಸ್ತಾಪವಾಗಿದ್ದು, ಮುಂದಿನ ಗ್ರಾಮಸಭೆಯಲ್ಲೂ ಚರ್ಚೆಗೆ ಬರಲಿದೆ ಎಂದು ಗ್ರಾಮ ಪಂಚಾಯತ್ ಅಧ್ಯಕ್ಷರು ಹೇಳಿದ್ದಾರೆ.
ಆದರೆ ಅಂಗನವಾಡಿ ಕಾರ್ಯಕರ್ತೆ ಅಂತಹ ಯಾವುದೇ ಘಟನೆ ನಡೆದಿಲ್ಲ, ನಮ್ಮ ಗಮನಕ್ಕೆ ಬರಲಿಲ್ಲ ಎಂದಿದ್ದಾರೆ.
- Advertisement -