Thursday, May 16, 2024
Homeಕರಾವಳಿಬೆಳ್ತಂಗಡಿ; ಅಂಗನವಾಡಿಯಲ್ಲಿ ವಿತರಿಸಿದ ಮೊಟ್ಟೆಯನ್ನು ಬೇಯಿಸಿದಾಗ ಪತ್ತೆಯಾಯ್ತು ಕೋಳಿ ಮರಿ

ಬೆಳ್ತಂಗಡಿ; ಅಂಗನವಾಡಿಯಲ್ಲಿ ವಿತರಿಸಿದ ಮೊಟ್ಟೆಯನ್ನು ಬೇಯಿಸಿದಾಗ ಪತ್ತೆಯಾಯ್ತು ಕೋಳಿ ಮರಿ

spot_img
- Advertisement -
- Advertisement -

ಬೆಳ್ತಂಗಡಿ; ಅಂಗನವಾಡಿಯಲ್ಲಿ ವಿತರಿಸಿದ ಮೊಟ್ಟೆಯನ್ನು ಬೇಯಿಸಿದಾಗ ಕೋಳಿ ಮರಿ ಪತ್ತೆಯಾದ ಅಚ್ಚರಿಯ ಘಟನೆ ಬೆಳ್ತಂಗಡಿ ತಾಲೂಕಿನ ರೆಖ್ಯ, ಅರಸಿನಮಕ್ಕಿಯಲ್ಲಿ ಬೆಳಕಿಗೆ ಬಂದಿದೆ.

ರೆಖ್ಯ ಗ್ರಾಮದ ಎಂಜಿರ-ಕಟ್ಟೆ ಅಂಗನವಾಡಿ ಕೇಂದ್ರದಿಂದ ವಿತರಣೆಯಾಗಿದ್ದ ಮೊಟ್ಟೆಯನ್ನು ಪಡೆದುಕೊಂಡಿದ್ದ ಮಗುವಿನ ಮನೆಯಲ್ಲಿ ಬೇಯಿಸಿದಾಗ, ಮೊಟ್ಟೆಯೊಳಗೆ ಹೆಪ್ಪುಗಟ್ಟಿದ ರಕ್ತ, ಅದಾಗಲೇ ಹೊರಬರಬೇಕಿದ್ದ ಮರಿ ಕಂಡು ಬಂದಿದೆ.

ಇದೇ ರೀತಿಯ ಅನೇಕ ಅನುಭವಗಳನ್ನು ಮೊಟ್ಟೆ ಪಡೆದುಕೊಂಡ ಹಲವು ಮನೆಯವರು ಹಂಚಿಕೊಂಡಿದ್ದಾರೆ ಎನ್ನಲಾಗಿದೆ.  ಈ ವಿಚಾರ ಅರಸಿನಮಕ್ಕಿ ಗ್ರಾ.ಪಂ ನ ವಾರ್ಡ್ ಸಭೆಯಲ್ಲಿ ಪ್ರಸ್ತಾಪವಾಗಿದ್ದು, ಮುಂದಿನ ಗ್ರಾಮಸಭೆಯಲ್ಲೂ ಚರ್ಚೆಗೆ ಬರಲಿದೆ ಎಂದು ಗ್ರಾಮ ಪಂಚಾಯತ್ ಅಧ್ಯಕ್ಷರು ಹೇಳಿದ್ದಾರೆ.

ಆದರೆ ಅಂಗನವಾಡಿ ಕಾರ್ಯಕರ್ತೆ ಅಂತಹ ಯಾವುದೇ ಘಟನೆ ನಡೆದಿಲ್ಲ, ನಮ್ಮ ಗಮನಕ್ಕೆ ಬರಲಿಲ್ಲ ಎಂದಿದ್ದಾರೆ.

- Advertisement -
spot_img

Latest News

error: Content is protected !!