Thursday, June 25, 2026
Homeಕರಾವಳಿಮಂಗಳೂರುಬೆಳ್ತಂಗಡಿ : ಬಿ ಎಸ್ ವೈ ಅಭಿಮಾನೋತ್ಸವ ಸಮಾರಂಭಕ್ಕೆ ತೆರಳಿದ ಬೆಳ್ತಂಗಡಿ ಬಿಜೆಪಿ ಯುವಮೋರ್ಚಾ ತಂಡ

ಬೆಳ್ತಂಗಡಿ : ಬಿ ಎಸ್ ವೈ ಅಭಿಮಾನೋತ್ಸವ ಸಮಾರಂಭಕ್ಕೆ ತೆರಳಿದ ಬೆಳ್ತಂಗಡಿ ಬಿಜೆಪಿ ಯುವಮೋರ್ಚಾ ತಂಡ

- Advertisement -
- Advertisement -

ಬೆಳ್ತಂಗಡಿ : ಅರ್ಧ ಶತಮಾನದ ಸುದೀರ್ಘ ರಾಜಕೀಯ ಜೀವನದಲ್ಲಿ, ಜನರ ಕಷ್ಟಗಳಿಗೆ ಸ್ಪಂದಿಸುತ್ತಾ, ನಾಡಿನ ಅಭಿವೃದ್ಧಿಗಾಗಿ ಶ್ರಮಿಸಿದ ಜನಾನುರಾಗಿ ಶ್ರೀ ಬಿ.ಎಸ್. ಯಡಿಯೂರಪ್ಪನವರ ಸಾರ್ಥಕ 50 ವರ್ಷಗಳ ಜನಸೇವೆಯ ನಿಮಿತ್ತ ಮಾದಾರ ಚೆನ್ನಯ್ಯ ಗುರುಪೀಠದ ಪಕ್ಕದ ಮೈದಾನ, ಚಿತ್ರದುರ್ಗದಲ್ಲಿ ಮೇ 09 ಹಮ್ಮಿಕೊಂಡಿರುವ ಬಿ ಎಸ್ ವೈ ಅಭಿಮಾನೋತ್ಸವ ಸಮಾರಂಭಕ್ಕೆ ಬೆಳ್ತಂಗಡಿ ಬಿಜೆಪಿ ಯುವಮೋರ್ಚಾ ತಂಡ ತೆರಳಿದೆ.

ಬೆಳ್ತಂಗಡಿ ಯುವಮೋರ್ಚಾ ಅಧ್ಯಕ್ಷರಾದ ಶಶಿರಾಜ್ ಶೆಟ್ಟಿ ಗುರುವಾಯನಕೆರೆ, ಪ್ರಧಾನ ಕಾರ್ಯದರ್ಶಿ ವಿನೀತ್ ಕೋಟ್ಯಾನ್ ಸಾವ್ಯ,ಉಪಾಧ್ಯಕ್ಷರುಗಳಾದ ಗಣೇಶ್ ಲಾಯಿಲ, ಹರೀಶ್ ಸಂಬೊಲ್ಯ,ಸುಜಿತ್ ಪೆರಾಡಿ,ಕಾರ್ಯದರ್ಶಿಗಳಾದ ಗಿರೀಶ್ ಗೌಡ ಬಿ.ಕೆ. ಬಂದಾರು, ಜಗದೀಶ್ ಕನ್ನಾಜೆ, ಕೋಶಾಧಿಕಾರಿ ಸ್ವಸ್ತಿಕ್ ಗೌಡ ಹಟತ್ತೋಡಿ, ಕುಕ್ಕಳ, ಕಾರ್ಯಕಾರಿಣಿ ಸಮಿತಿ ಸದಸ್ಯರುಗಳಾದ ಪವನ್ ಬಂಗೇರ ನಗರ, ಪ್ರಸಾದ್ ಸುದೆಮುಗೇರು,ಜಯಕುಮಾರ್ ಶಿರ್ಲಾಲು ಹಾಗೂ ಮಹಾಶಕ್ತಿ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

- Advertisement -

Latest News

error: Content is protected !!