Thursday, June 4, 2026
Homeಕರಾವಳಿಬೆಳ್ತಂಗಡಿ : ಅಗ್ನಿಶಾಮಕ ಠಾಣೆಯ ಸಹಾಯಕ ಅಗ್ನಿಶಾಮಕ ಠಾಣಾಧಿಕಾರಿ ಸೇವಾ ನಿವೃತ್ತಿ

ಬೆಳ್ತಂಗಡಿ : ಅಗ್ನಿಶಾಮಕ ಠಾಣೆಯ ಸಹಾಯಕ ಅಗ್ನಿಶಾಮಕ ಠಾಣಾಧಿಕಾರಿ ಸೇವಾ ನಿವೃತ್ತಿ

- Advertisement -
- Advertisement -

ಬೆಳ್ತಂಗಡಿ: ಗುರುವಾಯನಕೆರೆಯಲ್ಲಿರುವ ಅಗ್ನಿಶಾಮಕ ಠಾಣೆಯ ಸಹಾಯಕ ಅಗ್ನಿಶಾಮಕ ಠಾಣಾಧಿಕಾರಿಯವರು ವಿಶ್ವನಾಥ್ ಪೂಜಾರಿ(60) ಇಂದು ಸೇವೆಯಿಂದ ನಿವೃತ್ತಿ ಹೊಂದಿದ್ದಾರೆ.

ಬೆಳ್ತಂಗಡಿ ಅಗ್ನಿಶಾಮಕ ಠಾಣೆಯಲ್ಲಿ ಇವರು ಆರು ತಿಂಗಳ ಕಾಲ ಕರ್ತವ್ಯ ನಿರ್ವಹಿಸುತ್ತಿದ್ದರು. ಸುಳ್ಯ ಅಗ್ನಿಶಾಮಕ ಠಾಣೆಯಿಂದ ಬೆಳ್ತಂಗಡಿ ಠಾಣೆಗೆ  ಸಹಾಯಕ ಅಗ್ನಿಶಾಮಕ ಠಾಣಾಧಿಕಾರಿಯಾಗಿ ಪದೋನ್ನತಿ ಹೊಂದಿದ್ದರು. ಅಗ್ನಿಶಾಮಕ,ಪ್ರಮುಖ ಅಗ್ನಿಶಾಮಕರಾಗಿ ಸತತ ಮೂವತ್ತು ವರ್ಷಗಳ ಕಾಲ ಅಗ್ನಿಶಾಮಕ ಠಾಣೆಗಳಲ್ಲಿ ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಿದ ಇವರು ಇಂದು ಸೇವೆಯಿಂದ ನಿವೃತ್ತಿ ಹೊಂದಿದ್ದಾರೆ.

- Advertisement -

Latest News

error: Content is protected !!