Sunday, May 19, 2024
Homeಕರಾವಳಿಬಸ್ಸಿನಲ್ಲೇ‌ ಹೃದಯಾಘಾತ: ಬೆಳ್ತಂಗಡಿ SBI ಬ್ಯಾಂಕ್ ಸಿಬ್ಬಂದಿ ಸಾವು

ಬಸ್ಸಿನಲ್ಲೇ‌ ಹೃದಯಾಘಾತ: ಬೆಳ್ತಂಗಡಿ SBI ಬ್ಯಾಂಕ್ ಸಿಬ್ಬಂದಿ ಸಾವು

spot_img
- Advertisement -
- Advertisement -

ಬೆಳ್ತಂಗಡಿ; ನಗರದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಬ್ಯಾಂಕ್ ನಲ್ಲಿ ಸೀನಿಯರ್ ಅಸಿಸ್ಟೆಂಟ್ ಆಗಿ ಕಾರ್ಯನಿರ್ವಹಿಸುತ್ತಿದ್ದ ವ್ಯಕ್ತಿಯೊಬ್ಬರು ಕರ್ತವ್ಯಕ್ಕೆ ಆಗಮಿಸುತ್ತಿದ್ದಾಗ ಸರಕಾರಿ ಬಸ್ಸಿನಲ್ಲೇ ಹೃದಯಾಘಾತದಿಂದ ನೀದನರಾದ ಘಟನೆ ನಡೆದಿದೆ.

ಮೃತರನ್ನು ಬಂಟ್ವಾಳ ತಾಲೂಕು ರಾಮಲ್‌ಕಟ್ಟೆ ನಿವಾಸಿ ಚನಿಯ ನಾಯ್ಕ್ ( 57ವ.) ಎಂಬವರೆಂದು ಗುರುತಿಸಲಾಗಿದೆ.

ಎಂದಿನಂತೆ ಬೆಳಿಗ್ಗೆ ಮನೆಯಿಂದ ಹೊರಟು ಬಸ್ಸಿನಲ್ಲಿ ಬರುತ್ತಿದ್ದಾಗ ಘಟನೆ ನಡೆದಿದ್ದು, ತಕ್ಷಣ ಅವರನ್ನು ಸ್ಥಳೀಯ ಆಸ್ಪತ್ರೆಗೆ ಕೊಂಡೊಯ್ಯಲಾಯಿತಾದರೂ ಅದಾಗಲೇ ಅವರು ಅಸುನೀಗಿದ್ದರು.

ಮೃತರು ಪತ್ನಿ, ಎರಡು ಗಂಡು, ಒಂದು ಹೆಣ್ಣು ಮಕ್ಕಳು ಹಾಗೂ ಬಂಧುವರ್ಗದವರನ್ನು ಅಗಲಿದ್ದಾರೆ.
ಮೃತರ ಮನೆಗೆ ಬೆಳ್ತಂಗಡಿ ಎಸ್.ಬಿ.ಐ ಮೆನೇಜರ್ ಅರವಿಂದ ನಾಯಕ್ ಹಾಗೂ ಸಿಬ್ಬಂದಿಗಳು ಭೇಟಿನೀಡಿ ಅಂತಿಮ‌ದರ್ಶನ ಪಡೆದು ಮನೆಯವರಿಗೆ ಸಾಂತ್ವನ ಹೇಳಿದ್ದಾರೆ

- Advertisement -
spot_img

Latest News

error: Content is protected !!