Sunday, August 9, 2026
Homeಕರಾವಳಿಮಂಗಳೂರುಬೆಳ್ತಂಗಡಿ : ವಿದ್ಯಾರ್ಥಿಗಳ ಕನಸುಗಳಿಗೆ ಸಮಾಜದ ಬೆಂಬಲ ಅಗತ್ಯ: ರಕ್ಷಿತ್ ಶಿವರಾಂ

ಬೆಳ್ತಂಗಡಿ : ವಿದ್ಯಾರ್ಥಿಗಳ ಕನಸುಗಳಿಗೆ ಸಮಾಜದ ಬೆಂಬಲ ಅಗತ್ಯ: ರಕ್ಷಿತ್ ಶಿವರಾಂ

- Advertisement -
- Advertisement -

ಬೆಳ್ತಂಗಡಿ : ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಕೌಶಲ್ಯ, ಸಂಸ್ಕಾರ ಹಾಗೂ ಸಾಮಾಜಿಕ ಜವಾಬ್ದಾರಿಯನ್ನು ಬೆಳೆಸಿಕೊಂಡು ದೇಶದ ಭವಿಷ್ಯ ರೂಪಿಸುವ ಶಕ್ತಿಯಾಗಬೇಕು ಎಂದು ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ಅಧ್ಯಕ್ಷರಾದ ರಕ್ಷಿತ್ ಶಿವರಾಂ ಹೇಳಿದರು.

ದೇವಾಡಿಗರ ಸೇವಾ ವೇದಿಕೆ (ರಿ.) ವೇಣೂರು ವಲಯದ ವತಿಯಿಂದ ಆ.9 ರಂದು ಆಯೋಜಿಸಲಾದ ಪ್ರತಿಭಾ ಪುರಸ್ಕಾರ ಹಾಗೂ ವಿದ್ಯಾರ್ಥಿವೇತನ ವಿತರಣಾ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಇಂದಿನ ಯುವಜನತೆಗೆ ಅವಕಾಶಗಳ ದೊಡ್ಡ ಜಗತ್ತಿದ್ದು, ತಂತ್ರಜ್ಞಾನವನ್ನು ಕೇವಲ ಮನರಂಜನೆಗೆ ಬಳಸದೆ ಜ್ಞಾನ ಮತ್ತು ಕೌಶಲ್ಯವನ್ನು ಬೆಳೆಸಿಕೊಳ್ಳಲು ಬಳಸಬೇಕು. ಮೊಬೈಲ್ ನಮ್ಮ ಕೈಯಲ್ಲಿರಬೇಕೇ ಹೊರತು, ನಮ್ಮ ಜೀವನ ಮೊಬೈಲ್‌ನ ಕೈಯಲ್ಲಿರಬಾರದು ಎಂದು ಅವರು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಶಿಕ್ಷಣವೆಂದರೆ ಕೇವಲ ಪದವಿ ಪಡೆಯುವುದಲ್ಲ. ಜ್ಞಾನದ ಜೊತೆಗೆ ಮಾನವೀಯ ಮೌಲ್ಯಗಳು ಹಾಗೂ ಸಾಮಾಜಿಕ ಬದ್ಧತೆಯನ್ನು ಬೆಳೆಸಿಕೊಳ್ಳುವುದು ಮುಖ್ಯ. ವಿದ್ಯಾರ್ಥಿಗಳು ತಮ್ಮ ಸಾಧನೆಯನ್ನು ವೈಯಕ್ತಿಕ ಯಶಸ್ಸಿಗೆ ಮಾತ್ರ ಸೀಮಿತಗೊಳಿಸದೆ, ತಮ್ಮ ಕುಟುಂಬ ಮತ್ತು ಸಮಾಜದ ಪ್ರಗತಿಗೂ ಕೊಡುಗೆ ನೀಡಬೇಕು ಎಂದು ರಕ್ಷಿತ್ ಶಿವರಾಂ ಹೇಳಿದರು.

ಆರ್ಥಿಕವಾಗಿ ಹಿಂದುಳಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನೀಡುವುದು ಕೇವಲ ಆರ್ಥಿಕ ನೆರವಲ್ಲ. ಒಬ್ಬ ವಿದ್ಯಾರ್ಥಿಯ ಶಿಕ್ಷಣಕ್ಕೆ ನೆರವು ನೀಡುವುದು ಒಂದು ಕುಟುಂಬದ ಹಾಗೂ ಸಮಾಜದ ಭವಿಷ್ಯಕ್ಕೆ ನೆರವು ನೀಡಿದಂತೆ ಎಂದು ಅವರು ಅಭಿಪ್ರಾಯಪಟ್ಟರು.

ಪ್ರತಿಭಾ ಪುರಸ್ಕಾರ ಪಡೆಯುತ್ತಿರುವ ವಿದ್ಯಾರ್ಥಿಗಳು ತಮ್ಮ ಪರಿಶ್ರಮವನ್ನು ಮುಂದುವರಿಸಿ ಇನ್ನಷ್ಟು ಎತ್ತರಕ್ಕೆ ಬೆಳೆಯಬೇಕು. ಸೋಲು ಹಾಗೂ ವೈಫಲ್ಯಗಳಿಗೆ ಹೆದರದೆ, ಅವುಗಳನ್ನು ಯಶಸ್ಸಿನ ಮೆಟ್ಟಿಲುಗಳಾಗಿ ಪರಿವರ್ತಿಸಿಕೊಳ್ಳಬೇಕು ಎಂದು ಅವರು ಕರೆ ನೀಡಿದರು.

ಕಾರ್ಯಕ್ರಮದಲ್ಲಿ  ಈ ಸಂದರ್ಭದಲ್ಲಿ ಧರ್ಮಪಾಲ್ ಯು. ದೇವಾಡಿಗ ಅಧ್ಯಕ್ಷರು, ವಿಶ್ವದೇವಾಡಿಗ ಮಹಾಮಂಡಲ, ಬಾರ್ಕೂರು, ಪ್ರಕಾಶ್ ದೇವಾಡಿಗ ಪಂಚಾಯತ್ ಅಭಿವೃದ್ಧಿ ಅಧಿಕಾರಿ, ವೇಣೂರು ಶ್ರೀಮತಿ ಸುಮತಿ ಪಿ. ಎನ್. ಅಧ್ಯಕ್ಷರು, ದೇವಾಡಿಗರ ಮಹಿಳಾ ವೇದಿಕೆ, ವೇಣೂರು ಶ್ರೀಮತಿ ಮಲ್ಲಿಕಾ ಹೆಗ್ಡೆ ಅಧ್ಯಕ್ಷರು, ಗ್ರಾಮ ಪಂಚಾಯತು ವೇಣೂರು ಹರೀಶ್ ದೇವಾಡಿಗ ಉಪನ್ಯಾಸಕರು, ಎಕ್ಸೆಲ್ ಕಾಲೇಜು ಗುರುವಾಯನಕೆರೆ  ಶೇಖರ ದೇವಾಡಿಗ ಉದ್ಯಮಿಗಳು, ಪಾಲಬೆ ಅಳದಂಗಡಿ

ಶ್ರೀಮತಿ ಜಯಂತಿ ತಿಮ್ಮಪ್ಪ ದೇವಾಡಿಗ ಸದಸ್ಯರು, ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಆಡಳಿತ ಮಂಡಳಿ, ವೇಣೂರು ಗೌರವಾಧ್ಯಕ್ಷರಾದ ಸುರೇಶ್ ಮೊಯ್ಲಿ,ದೇವಾಡಿಗರ ಸೇವಾ ವೇದಿಕೆಯ ಪದಾಧಿಕಾರಿಗಳು, ಗಣ್ಯರು, ಶಿಕ್ಷಕರು, ಪೋಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

- Advertisement -

Latest News

error: Content is protected !!