Monday, May 6, 2024
Homeಕರಾವಳಿಬೆಳ್ತಂಗಡಿ : ಮದಡ್ಕದಲ್ಲಿ ಘರ್ಜಿಸಿದ ಜೆಸಿಬಿ; ಅಕ್ರಮ ಶೆಡ್ ನೆಲಸಮಗೊಳಿಸಿದ ತಹಶೀಲ್ದಾರ್

ಬೆಳ್ತಂಗಡಿ : ಮದಡ್ಕದಲ್ಲಿ ಘರ್ಜಿಸಿದ ಜೆಸಿಬಿ; ಅಕ್ರಮ ಶೆಡ್ ನೆಲಸಮಗೊಳಿಸಿದ ತಹಶೀಲ್ದಾರ್

spot_img
- Advertisement -
- Advertisement -

ಬೆಳ್ತಂಗಡಿ : ಮದಡ್ಕದಲ್ಲಿ  ಸರಕಾರಿ ಜಾಗದಲ್ಲಿ ಅಕ್ರಮವಾಗಿ ನಿರ್ಮಾಣ ಮಾಡಿದ್ದ ಶೆಡ್ ನ್ನು ಜೆಸಿಬಿ ಮೂಲಕ  ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ ನೇತೃತ್ವದ ತಂಡ ನೆಲಸಮಗೊಳಿಸಿದೆ.

ಪ್ರಕರಣದ ವಿವರ:ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಮದಡ್ಕ ಹಾಲಿನ ಡೈರಿ ಹಿಂಭಾಗದ ಸರ್ವೆ ನಂಬರ್ 149/3A ನಲ್ಲಿ 11 ಸೆನ್ಸ್ ಖಾಲಿ ಜಾಗದಲ್ಲಿ ಅಬುಸಾಲಿ ಮಕ್ಕಳಾದ ರೌಫ್ ಮತ್ತು ನಿಸರ್ ಸಹೋದರರು ಅಕ್ರಮವಾಗಿ ಶೆಡ್ ನಿರ್ಮಾಣ ಮಾಡಿದ್ದರು. ಈ ಬಗ್ಗೆ ಬೆಳ್ತಂಗಡಿ ಕಂದಾಯ ಇಲಾಖೆಗೆ ದೂರು ಬಂದಿತ್ತು. ಅದರಂತೆ ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ ಮತ್ತು ಕಂದಾಯ ಇಲಾಖೆಯ ಸಿಬ್ಬಂದಿ ಜ.18 ಕ್ಕೆ ಜಾಗದ ಪರಿಶೀಲನೆಗೆ ತೆರಳಿದ್ದರು. ಈ ವೇಳೆ ರೌಫ್ ಮತ್ತು ನಿಸರ್ ತಹಶೀಲ್ದಾರ್ ಮೇಲೆ ಹಲ್ಲೆಗೆ ಯತ್ನಿಸಿದ್ದರು.ಬಳಿಕ ಕಂದಾಯ ನಿರೀಕ್ಷಕರಿಗೂ ಬೆದರಿಕೆ ಹಾಕಿ ಕರ್ತವ್ಯಕ್ಕೆ ಅಡ್ಡಿ ಪಡಿಸಿದ್ದರು. ಈ ಬಗ್ಗೆ ತಹಶೀಲ್ದಾರ್ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಜ.19 ರಂದು ದೂರು ನೀಡಿದ್ದರು. ಜ.24 ರಂದು ಇಬ್ಬರು ಆರೋಪಿಗಳನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದರು.

ಜೆಸಿಬಿ ಘರ್ಜನೆ:ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ ನೇತೃತ್ವದ ಕಂದಾಯ ಇಲಾಖೆಯ ಸಿಬ್ಬಂದಿ ಜ.25 ರಂದು ಸಂಜೆ (ಇಂದು) ಜೆಸಿಬಿ ಬಳಸಿ ಅಕ್ರಮ ಶೆಡ್ ನೆಲಸಮ ಮಾಡಲಾಯಿತು. ಈ ವೇಳೆ ಅಹಿತಕರ ಘಟನೆ ನಡೆಯದಂತೆ ಬೆಳ್ತಂಗಡಿ ಪೊಲೀಸರು ಭದ್ರತೆ ವಹಿಸಿದ್ದರು.

- Advertisement -
spot_img

Latest News

error: Content is protected !!