Monday, May 6, 2024
Homeಕರಾವಳಿಬೆಳ್ತಂಗಡಿ: ಮಗನಿಂದಲೇ ಹಲ್ಲೆ ಪ್ರಕರಣ- ಗಂಭೀರ ಗಾಯಗೊಂಡಿದ್ದ ಅಪ್ಪ ಆಸ್ಪತ್ರೆಯಲ್ಲಿ ಸಾವು

ಬೆಳ್ತಂಗಡಿ: ಮಗನಿಂದಲೇ ಹಲ್ಲೆ ಪ್ರಕರಣ- ಗಂಭೀರ ಗಾಯಗೊಂಡಿದ್ದ ಅಪ್ಪ ಆಸ್ಪತ್ರೆಯಲ್ಲಿ ಸಾವು

spot_img
- Advertisement -
- Advertisement -

ಬೆಳ್ತಂಗಡಿ: ನಗರದ ಜ್ಯೂನಿಯರ್ ಕಾಲೇಜ್ ಗ್ರೌಂಡ್ ರಸ್ತೆಯಲ್ಲಿ ವಾಕಿಂಗ್ ಮಾಡುತ್ತಿದ್ದ ವೇಳೆ ಟ್ಯಾಕ್ಸಿ ವಾಹನ ಚಾಲಕ ವಾಸು ಸಪಲ್ಯ ಎಂಬವರ ಮೇಲೆ ಅವರ ಮಗನೇ ಮಾರಾಕಾಸ್ತ್ರಗಳಿಂದ ದಾಳಿ ನಡೆಸಿದ ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದ ವಾಸು ಸಪಲ್ಯ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.

ಮೃತ ವಾಸು ಸಪಲ್ಯ

ಎರಡನೇ ಮಗ ದಯಾನಂದ(38) ಈ ಕೃತ್ಯ ನಡೆಸಿದ್ದು, ನಂತರ ಫೋನ್ ಸ್ವಿಚ್ ಆಫ್ ಮಾಡಿ ಪರಾರಿಯಾಗಿದ್ದಾನೆ ಎಂದು ತಿಳಿದು ಬಂದಿದೆ. ಘಟನೆ ನಡೆದ ಸ್ಥಳದಲ್ಲಿ ಕೃತ್ಯಕ್ಕೆ ಬಳಸಿದ ತಲವಾರ್ ಪತ್ತೆಯಾಗಿದೆ. ಬೆಳ್ತಂಗಡಿ ಪಿಎಸ್ಐ ನಂದಕುಮಾರ್ , ಇನ್ಸ್‌ಪೆಕ್ಟರ್ ಸಂದೇಶ್.ಪಿ.ಜಿ ತಂಡ ಆರೋಪಿ ಪತ್ತೆಗಾಗಿ ಪೊಲೀಸರು ಬಲೆ ಬಿಸಿದ್ದಾರೆ.

ಮಗ ದಯಾನಂದ

ಬೆಳ್ತಂಗಡಿ ಜ್ಯೂನಿಯರ್ ಕಾಲೇಜ್ ರಸ್ತೆಯಲ್ಲಿರುವ ಅರಣ್ಯ ಇಲಾಖೆಯ ಗೋಡೌನ್ ಹಿಂಭಾಗದಲ್ಲಿ ವಾಸವಾಗಿದ್ದ ವಾಸು ಸಪಲ್ಯ, ಇಂದು ಬೆಳಗ್ಗಿನ ಜಾವ ವಾಕಿಂಗ್ ಮಾಡೋದನ್ನು ಕಾದು ಕುಳಿತಿದ್ದ ಮಗ ದಾಳಿ ನಡೆಸಿದ್ದಾನೆ ಎನ್ನಲಾಗಿದೆ. ದಾಳಿಯಿಂದಾಗಿ ವಾಸು ಸಪಲ್ಯ ಅವರು ಗಂಭೀರವಾಗಿ ಗಾಯಗೊಂಡಿದ್ದು ಕೂಡಲೇ ಮಂಗಳೂರಿನ ಎಜೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ವಾಸು ಸಪಲ್ಯ ಸಾವನ್ನಪ್ಪಿದ್ದಾರೆ.

ವಾಸು ಸಪಲ್ಯ ವೃತ್ತಿಯಲ್ಲಿ ಬೆಳ್ತಂಗಡಿಯಲ್ಲಿ ಟ್ಯಾಕ್ಸಿ ವಾಹನದ ಚಾಲಕರಾಗಿ ಕೆಲಸ‌ ಮಾಡುತ್ತಿದ್ದರು. ಮಗ ಕೂಡ ಚಾಲಕ ವೃತ್ತಿ ನಿರ್ವಹಿಸುತ್ತಿದ್ದು, ಮದ್ಯಪಾನ ಮಾಡಿ ತಂದೆ ಜೊತೆ ಗಲಾಟೆ ಅಗಿ ಈ ಹಿಂದೆ ಪ್ರಕರಣ ಠಾಣೆ ಮೆಟ್ಟಿಲೇರಿತ್ತು.

- Advertisement -
spot_img

Latest News

error: Content is protected !!