ಬೆಳ್ತಂಗಡಿ: ಸೌತ್ ಕೆನರಾ ಫೋಟೊಗ್ರಾಪರ್ಸ್ ಅಸೋಸಿಯೇಷನ್(ರಿ.) ದಕ್ಷಿಣ ಕನ್ನಡ-ಉಡುಪಿ ಜಿಲ್ಲೆ ಬೆಳ್ತಂಗಡಿ ವಲಯದ ವತಿಯಿಂದ ವಿಶ್ವ ಛಾಯಾಗ್ರಹಣ ದಿನದ ಅಂಗವಾಗಿ ಬೆಳ್ತಂಗಡಿ ವಲಯದ ಹಿರಿಯ ಛಾಯಾಗ್ರಾಹಕ ನಿರಂಜನ ಪೂಂಜಾ ಕಡಿರುದ್ಯಾವರ ಅವರನ್ನು ಸನ್ಮಾನಿಸಲಾಯಿತು.
ವೇದಿಕೆಯಲ್ಲಿ ವಲಯದ ಅಧ್ಯಕ್ಷ ಸುರೇಶ್ ಬಿ. ಕೌಡಂಗೆ, ಗೌರವಾಧ್ಯಕ್ಷ ಎನ್. ಎ. ಗೋಪಾಲ್ ಅಳದಂಗಡಿ, ಸ್ಥಾಪಕಾಧ್ಯಕ್ಷ ಪಾಲಾಕ್ಷ ಪಿ. ಸುವರ್ಣ, ಜಿಲ್ಲಾ ಸಾಂಸ್ಕೃತಿಕ ಕಾರ್ಯದರ್ಶಿ ಕಿರಣ್ ಕುಮಾರ್ ಅಳದಂಗಡಿ, ಸೌ.ಕೆ.ಫೋ.ಅ ನ ಜಿಲ್ಲಾ ಮಾಜಿ ಅಧ್ಯಕ್ಷರು & ಸೌ.ಕೆ.ಫೋ ವಿವಿದ್ಧೋದ್ದೇಶ ಸಹಕಾರಿ ಸಂಘದ ನಿರ್ದೇಶಕರಾದ ವಿಲ್ಸನ್ ಜಾರ್ಜ್ ಗೊನ್ಸಾಲ್ವಿಸ್, ವಲಯದ ಪ್ರಧಾನ ಕಾರ್ಯದರ್ಶಿ ಗಂಗಾಧರ ಉಜಿರೆ, ಕೋಶಾಧಿಕಾರಿ ಪ್ರಭಾಕರ ಧರ್ಮಸ್ಥಳ, ವಲಯದ ಮಾಜಿ ಅಧ್ಯಕ್ಷರು, ವಲಯದ ಸರ್ವಸದಸ್ಯರು ಉಪಸ್ಥಿತರಿದ್ದರು.
ಕೆ. ವಸಂತ್ ಶರ್ಮ ಉಜಿರೆ ಸನ್ಮಾನಿತರ ಪರಿಚಯ ಓದಿದರು. ವಿಲ್ಸನ್ ಜಾರ್ಜ್ ಗೊನ್ಸಾಲ್ವಿಸ್ ವಿಶ್ವ ಛಾಯಾಗ್ರಹಣ ದಿನದ ಶುಭಾಶಯ ಹೇಳಿದರು. ವಲಯದ ಅಧ್ಯಕ್ಷ ಸುರೇಶ್ ಬಿ. ಕೌಡಂಗೆ ಸ್ವಾಗತಿಸಿ, ವಲಯದ ಪತ್ರಿಕಾ ಪ್ರತಿನಿಧಿ ಉಮೇಶ್ ಮದ್ದಡ್ಕ ಕಾರ್ಯಕ್ರಮ ನಿರೂಪಿಸಿದರು. ಕಾರ್ಯದರ್ಶಿ ಗಂಗಾಧರ ಉಜಿರೆ ಧನ್ಯವಾದವಿತ್ತರು.