Sunday, May 5, 2024
Homeತಾಜಾ ಸುದ್ದಿಬ್ರಹ್ಮಗಿರಿ ಬೆಟ್ಟ ದುರಂತ: ತಲಕಾವೇರಿ ಪ್ರಧಾನ ಅರ್ಚಕ ನಾರಾಯಣ ಆಚಾರ್ ಮೃತದೇಹ ಪತ್ತೆ

ಬ್ರಹ್ಮಗಿರಿ ಬೆಟ್ಟ ದುರಂತ: ತಲಕಾವೇರಿ ಪ್ರಧಾನ ಅರ್ಚಕ ನಾರಾಯಣ ಆಚಾರ್ ಮೃತದೇಹ ಪತ್ತೆ

spot_img
- Advertisement -
- Advertisement -

ಮಡಿಕೇರಿ: ಭಾರೀ ಮಳೆಯಿಂದಾಗಿ ಬ್ರಹ್ಮಗಿರಿ ಬೆಟ್ಟ ಕುಸಿದು ನಾಪತ್ತೆಯಾಗಿದ್ದ ಅರ್ಚಕ ಕುಟುಂಬದ ಶೋಧ ನಡೆಸುತ್ತಿದ್ದ ಎನ್‍ಡಿಆರ್ ಎಫ್, ಎಸ್‍ಡಿಆರ್ ಎಫ್, ಪೊಲೀಸರು,ಅಗ್ನಿಶಾಮಕ ಸಿಬ್ಬಂದಿ ಕೊನೆಗೂ ತಲಾಕಾವೇರಿಯ ಪ್ರಧಾನ ಅರ್ಚಕ ನಾರಾಯಣ ಆಚಾರ್ ಅವರ ದೇಹವನ್ನು ಪತ್ತೆ ಮಾಡಿದ್ದಾರೆ. ಈ ಮೂಲಕ ಇದುವರೆಗೆ ಇಬ್ಬರ ಮೃತದೇಹ ಪತ್ತೆಯಾದಂತೆ ಆಗಿದೆ.

ಕಳೆದ 6 ದಿನಗಳ ಹಿಂದೆ ಸುರಿದಂತ ಭಾರೀ ಮಳೆಯಿಂದಾಗಿ ತಲಕಾವೇರಿಯ ಪ್ರಧಾನ ಅರ್ಚಕ ನಾರಾಯಣ ಆಚಾರ್ ಅವರ ಮನೆಯ ಮೇಲೆ ಬ್ರಹ್ಮಗಿರಿ ಬೆಟ್ಟ ಕುಸಿತಗೊಂಡಿತ್ತು. ಹೀಗಾಗಿ ಅರ್ಚಕ ನಾರಾಯಣ ಆಚಾರ್, ಅವರ ಪತ್ನಿ, ಅಣ್ಣ ಹಾಗೂ ಇಬ್ಬರು ಸಹಾಯಕರು ನಾಪತ್ತೆಯಾಗಿದ್ದರು.

ಇಂದು ಮಧ್ಯಾಹ್ನ ತಲಕಾವೇರಿಯ ಬ್ರಹ್ಮಗಿರಿಯಲ್ಲಿ ಬೆಟ್ಟ ಕುಸಿದು ಕಣ್ಮರೆಯಾಗಿದ್ದ ಆರು ದಿನಗಳ ನಂತರ ಅರ್ಚಕರ ದೇಹ ಪ್ರಪಾತದಲ್ಲಿ ಪತ್ತೆಯಾಗಿದೆ. ದೇವಸ್ಥಾನದಿಂದ ಅರ್ಧ ಕಿ.ಮೀ ದೂರದಲ್ಲಿ ಮಣ್ಣಿನ ಅಡಿಯಲ್ಲಿ ಹೂತುಹೋಗಿದ್ದ ಅವರ ದೇಹವನ್ನು ಹೊರತೆಗೆಯಲಾಗಿದೆ.

ಕಾರ್ಯಾಚರಣೆ ಸ್ಥಳದಲ್ಲಿ ನಾರಾಯಣ ಆಚಾರ್ ಅವರ ಪುತ್ರಿಯರಾದ ಶಾರದಾ ಮತ್ತು ನಮಿತ ಕೂಡ ಇದ್ದಾರೆ. ಇಂದು ನಾರಾಯಣ ಆಚಾರ್ ಅವರಿಗೆ ಸೇರಿದ ಎರಡು ಕಾರು, ಬೈಕ್, ನಾರಾಯಣ ಆಚಾರ್ ಅವರ ಮನೆ ನಾಯಿ ಮೃತದೇಹವೂ ಪತ್ತೆಯಾಗಿದೆ.

- Advertisement -
spot_img

Latest News

error: Content is protected !!