- Advertisement -
- Advertisement -
ಸುಳ್ಯ; ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಭಾಗೀರಥಿ ಮುರುಳ್ಯ ಅವರನ್ನು ಆಯ್ಕೆ ಮಾಡಲಾಗಿದೆ.ಭಾಗೀರಥಿ ಮುರುಳ್ಯ ಅವರ ಆಯ್ಕೆ ಅನೇಕರಿಗೆ ಅಚ್ಚರಿ ಮೂಡಿಸಿದೆ.
ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿರುವ ಭಾಗೀರಥಿ ಮುರುಳ್ಯ ಅವರು ಸಾಮಾನ್ಯ ಕಾರ್ಯಕರ್ತೆಯಾದ ನನಗೆ ಸುಳ್ಯ ಕ್ಷೇತ್ರದಿಂದ ಸ್ಪರ್ಧೆಗೆ ಬಿಜೆಪಿ ಅವಕಾಶ ನೀಡಿರುವುದು ಸಾಮಾನ್ಯ ಕಾರ್ಯಕರ್ತರಿಗೆ ಸಿಕ್ಕಿದ ಗೌರವ ಎಂದಿದ್ದಾರೆ.
ಸುಳ್ಯ ಕ್ಷೇತ್ರದಲ್ಲಿ ಗೆಲುವಿನ ವಿಶ್ವಾಸ ಇದೆ. ಇಲ್ಲಿ ಗೆಲ್ಲುವ ವಿಶ್ವಾಸ, ಮತ್ತು ಗೆಲ್ಲಿಸುವ ಶಕ್ತಿ ಪಕ್ಷಕ್ಕೆ ಮತ್ತು ಸಂಘಟನೆಗೆ ಇದೆ. ಪಕ್ಷ ತನ್ನನ್ನು ಆಯ್ಕೆ ಮಾಡಿ ಇಷ್ಟು ದೊಡ್ಡ ಜವಾಬ್ದಾರಿ ನೀಡುತ್ತಾರೆ ಎಂದು ನಿರೀಕ್ಷಿಸಿರಲಿಲ್ಲ ಎಂದು ಹೇಳಿದ್ದಾರೆ.
- Advertisement -