- Advertisement -
- Advertisement -
ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿ ಭಾಸ್ಕರ್ (49) ಅಪಘಾತಕ್ಕೆ ಬಲಿಯಾಗಿದ್ದಾರೆ. ನೇರಳಕಟ್ಟೆ ಪೆರುವಾಜೆ ಬೀರಕೋಡಿ ನಿವಾಸಿಯಾಗಿರುವ ಭಾಸ್ಕರ್ ಅವರು ಅ.17 ರಂದು ಮಂಗಳೂರಿನಲ್ಲಿ ಬೈಕ್ ನಲ್ಲಿ ಹೋಗುತ್ತಿದ್ದಾಗ ಕಾರೊಂದು ಭಾಸ್ಕರ್ ಅವರು ಚಲಾಯಿಸುತ್ತಿದ್ದ ಬೈಕಿಗೆ ಡಿಕ್ಕಿಯಾಗಿದೆ.
ತೀವ್ರ ಗಾಯಗೊಂಡ ಭಾಸ್ಕರ್ ಅವರನ್ನು ಮಂಗಳೂರು ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಆದರೆ ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಇಂದು ಶುಕ್ರವಾರ ಬೆಳಗ್ಗೆ ನಿಧನರಾಗಿದ್ದಾರೆ.
- Advertisement -