ಬೆಂಗಳೂರು : ಡಿವೈಎಸ್ಪಿ ಎಂ.ಕೆ ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಇಂಧನ ಸಚಿವ ಕೆಜೆ ಜಾರ್ಜ್ ಗೆ ಸುಪ್ರೀಂ ಕೋರ್ಟ್ ನಿಂದ ಬಿಗ್ ರಿಲೀಫ್ ಸಿಕ್ಕಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಆದೇಶವನ್ನು ಸುಪ್ರೀಂ ಎತ್ತಿ ಹಿಡಿದಿದೆ.
ಡಿವೈಎಸ್ಪಿ ಎಂ ಕೆ ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಹೈಕೋರ್ಟ್ ಪ್ರಕರಣದಲ್ಲಿ ಕೆಜೆ ಜಾರ್ಜ್ ಅವರ ಪಾತ್ರ ಇಲ್ಲ ಎಂದು ಆದೇಶ ನೀಡಿತ್ತು. ಹೈಕೋರ್ಟ್ ಆದೇಶದ ವಿರುದ್ಧ ಎಂ ಕೆ ಗಣಪತಿ ಅವರ ಸಹೋದರಿ ಸವಿತಾ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು.ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ಕರ್ನಾಟಕ ಹೈಕೋರ್ಟ್ ನೀಡಿದ ಆದೇಶವನ್ನು ಎತ್ತಿ ಹಿಡಿದಿದೆ ಈ ಮೂಲಕ ಇಂಧನ ಸಚಿವ ಕೆಜೆ ಚಾರ್ಜ್ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ.
ಏನಿದು ಪ್ರಕರಣ?
ಎಂಕೆ ಗಣಪತಿ ಅವರು ಮಂಗಳೂರಿನ ಉಪ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದಾಗ ಜುಲೈ 7, 2016 ರಂದು ಕೊಡಗಿನ ಲಾಡ್ಜ್ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ವೀಡಿಯೊ ಸಂದೇಶದಲ್ಲಿ ಅವರು ಕೆಜೆ ಜಾರ್ಜ್, ಎಎಂ ಪ್ರಸಾದ್ ಮತ್ತು ಪ್ರಣಬ್ ಮೊಹಾಂತಿ ನನ್ನ ಆತ್ಮಹತ್ಯೆಗೆ ಕಾರಣ ಎಂದು ಉಲ್ಲೇಖಿಸಿದ್ದರು.