Friday, March 29, 2024
Homeಕರಾವಳಿಮಂಜೇಶ್ವರದಲ್ಲಿ ಬಸ್ ಹಾಗೂ ಬೈಕ್ ನಡುವೆ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ಸಾವು

ಮಂಜೇಶ್ವರದಲ್ಲಿ ಬಸ್ ಹಾಗೂ ಬೈಕ್ ನಡುವೆ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ಸಾವು

spot_img
- Advertisement -
- Advertisement -

ಮಂಜೇಶ್ವರ: ಬಸ್ಸು ಮತ್ತು ಬೈಕ್ ನಡುವೆ ಉಂಟಾದ ಅಪಘಾತದಲ್ಲಿ ಯುವಕನೋರ್ವ ಮೃತಪಟ್ಟ ಘಟನೆ ನಿನ್ನೆ ರಾತ್ರಿ ಮಂಜೇಶ್ವರ ಹೊಸಂಗಡಿ ಪೇಟೆಯಲ್ಲಿ ನಡೆದಿದೆ.

ಪೈವಳಿಕೆ ಬೀಡುಬೈಲ್ ನ ಶಶಿಧರ (26) ಮೃತಪಟ್ಟವರು. ಮಂಗಳೂರಿನಿಂದ ಕಾಸರಗೋಡಿಗೆ ಬರುತ್ತಿದ್ದ ಕೇರಳ ಕೆ.ಎಸ್.ಆರ್.ಟಿ.ಸಿ ಬಸ್ಸು ಮತ್ತು ಬೈಕ್ ನಡುವೆ ಅಪಘಾತ ನಡೆದಿದೆ. ತಲಪಾಡಿ ಕಡೆಯಿಂದ ಬರುತ್ತಿದ್ದ ಬೈಕ್ ಗೆ ಬಸ್ಸು ಢಿಕ್ಕಿ ಹೊಡೆದಿದ್ದು, ಓವರ್ ಟೇಕ್ ಮಾಡುವ ಭರದಲ್ಲಿ ಈ ಅಪಘಾತ ಸಂಭವಿಸಿರುವ ಬಗ್ಗೆ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

ಅಪಘಾತದಲ್ಲಿ ಗಂಭೀರ ಗಾಯಗೊಂಡ ಶಶಿಧರರನ್ನು ಆಸ್ಪತ್ರೆಗೆ ತಲುಪಿಸಿದರೂ ಆಗಲೇ ಅವರು ಮೃತಪಟ್ಟಿದ್ದರು. ಮಂಜೇಶ್ವರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.

- Advertisement -
spot_img

Latest News

error: Content is protected !!