- Advertisement -
- Advertisement -
ಉಡುಪಿ: ರಸ್ತೆ ದಾಟುತ್ತಿದ್ದ ವೇಳೆ ಬೈಕೊಂದು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟುತ್ತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಪಾಂಗಾಳ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಸುರೇಶ್ ಶೇರಿಗಾರ್(50) ಮೃತ ದುರ್ದೈವಿ. ಇವರು ಮಂಗಳೂರು-ಉಡುಪಿ ಏಕಮುಖ ರಸ್ತೆಯನ್ನು ದಾಟುತ್ತಿದ್ದಾಗ ಕಾಪು ಕಡೆ ಯಿಂದ ಪಾಂಗಾಳ ಕಡೆಗೆ ಹೋಗುತ್ತಿದ್ದ ಬೈಕ್ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ.
ಇದರಿಂದ ಗಂಭೀರವಾಗಿ ಗಾಯಗೊಂಡ ಸುರೇಶ್ ಶೇರಿಗಾರ್, ಉಡುಪಿ ಖಾಸಗಿ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರು. ಅಪಘಾತ ನಡೆಸಿದ ಬೈಕ್ ಸವಾರ ಬೈಕ್ ನಿಲ್ಲಿಸದೆ ಪರಾರಿಯಾಗಿದ್ದಾನೆ.ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
- Advertisement -