- Advertisement -
- Advertisement -
ಅರಂತೋಡು: ಇಲ್ಲಿನ ಮಾಣಿ – ಮೈಸೂರು ಹೆದ್ದಾರಿಯಲ್ಲಿ ಬೈಕ್ ಅಪಘಾತವಾಗಿ ಸವಾರ ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡ ಘಟನೆ ಬುಧವಾರ ಅರಂತೋಡು ಸಮೀಪ ನಡೆದಿದ್ದು, ಸವಾರನ ತಲೆಗೆ ಗಂಭೀರ ಗಾಯವಾಗಿದೆ
ಗಾಯಗೊಂಡ ಮಂಗಳೂರು ಕಂಕನಾಡಿ ಪೊಲೀಸ್ ಠಾಣೆಯ ಸಿಬಂದಿ ಹರೀಶ್ ಅವರನ್ನು ಸ್ಥಳೀಯರು ಸುಳ್ಯದ ಖಾಸಗಿ ಆಸ್ಪತ್ರೆಗೆ ಕೊಂಡೊಯ್ದು, ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಕಳುಹಿಸಲಾಗಿದೆ ಎನ್ನಲಾಗಿದೆ
ಈ ಅಪಘಾತವು ಬುಧವಾರ ಬೆಳಗ್ಗೆ ಮೈಸೂರಿನಿಂದ ಬೈಕಿನಲ್ಲಿ ಮಂಗಳೂರಿಗೆ ಬರುತ್ತಿದ್ದ ಸಂದರ್ಭದಲ್ಲಿ ಸಂಭವಿಸಿದೆ.
- Advertisement -