- Advertisement -
- Advertisement -
ಚಾಮರಾಜನಗರ: ಬೈಕ್ ಹಾಗೂ ಕೆಎಸ್ಆರ್ಟಿಸಿ ಬಸ್ ನಡುವೆ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೋರ್ವ ಗಂಭೀರಗಾಯಗೊಂಡಿರುವ ಘಟನೆ ಮಲೆಮಹದೇಶ್ವರ ಬೆಟ್ಟದಲ್ಲಿ ನಡೆದಿದೆ.
ಮೃತನನ್ನು ಗುಂಡ್ಲುಪೇಟೆ ತಾಲೂಕಿನ ಕಮರಹಳ್ಳಿ ಗ್ರಾಮದ ಕೀರ್ತಿ (20) ಎಂದು ಗುರುತಿಸಲಾಗಿದ್ದು, ಹಿಂಬದಿ ಕುಳಿತಿದ್ದ ಮಾದೇಶ (20) ಗಂಭೀರ ಗಾಯಗೊಂಡಿದ್ದು ಕೊಳ್ಳೇಗಾಲ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ.
- Advertisement -