- Advertisement -
- Advertisement -
ಚಿಕ್ಕಮಗಳೂರು : ಕೆಎಸ್ ಆರ್ ಟಿಸಿ ಬಸ್ ಗೆ ಬೈಕ್ ಡಿಕ್ಕಿಯಾಗಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರಿನ ಕೃಷಿ ವ್ಯವಸಾಯೋತ್ಪನ್ನ ಕಚೇರಿ ಬಳಿ ನಡೆದಿದೆ. ಮೃತರನ್ನು ಶ್ರೀಧರ್ (28) ದಯಾನಂದ (30) ಮೃತ ದುರ್ದೈವಿಗಳು.
ವೇಗವಾಗಿ ಬಂದ ಬೈಕ್ ಬಸ್ ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಚಿಕ್ಕಮಗಳೂರು ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -