- Advertisement -
- Advertisement -
ಬೆಳ್ತಂಗಡಿ; ಲಾರಿ ಹಾಗೂ ಬೈಕ್ ಮುಖಾಮುಖಿ ಡಿಕ್ಕಿ ಸಂಭವಿಸಿ ಯುವಕ ಗಾಯಗೊಂಡಿರುವ ಘಟನೆ ಬೆಳ್ತಂಗಡಿಯ ಬೆಳಾಲು ಕೂಡಲ ಕೆರೆ ಎಂಬಲ್ಲಿ ನಡೆದಿದೆ.
ಬೈಕ್ ಸವಾರ ಸೃಜನ್(19) ಬೆಳಾಲು ನಿವಾಸಿ ಪ್ರಾಣಾಪಾಯದಿಂದ ಪಾರಾದ ಯುವಕ. ಸೋಮಂದಡ್ಕದಿಂದ ಬೆಳಾಲು ಕಡೆಗೆ ಬರುತ್ತಿದ್ದ ಲಾರಿ ಹಾಗೂ ಬೆಳಾಲಿನಿಂದ ಉಜಿರೆ ಗೆ ಬರುತ್ತಿದ್ದ ಬೈಕ್ ನಡುವೆ ಈ ಅಪಘಾತ ಸಂಭವಿಸಿದೆ.
ಇದೀಗ ಯುವಕ ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -