Friday, May 17, 2024
Homeಕರಾವಳಿಉಡುಪಿಉಡುಪಿ; ರಸ್ತೆ ಬದಿಯ ಚರಂಡಿಗೆ ಬೈಕ್ ಬಿದ್ದು ಯುವಕ ಸಾವು

ಉಡುಪಿ; ರಸ್ತೆ ಬದಿಯ ಚರಂಡಿಗೆ ಬೈಕ್ ಬಿದ್ದು ಯುವಕ ಸಾವು

spot_img
- Advertisement -
- Advertisement -

ಉಡುಪಿ : ಬೈಕೊಂದು ರಸ್ತೆ ಬದಿಯ ಚರಂಡಿಗೆ ಬಿದ್ದು ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಉಡುಪಿಯ ಅಂಬಲಪಾಡಿ- ಕಿನ್ನಿಮುಲ್ಕಿ ರಾಷ್ಟ್ರೀಯ ಹೆದ್ದಾರಿ 66ರ ಸರ್ವಿಸ್ ರಸ್ತೆಯಲ್ಲಿ ಇಂದು ಸಂಜೆ  ನಡೆದಿದೆ.

ಮಲ್ಪೆ ಕೊಡವೂರಿನ ಲಿಂಡನ್ ಅಮ್ಮನ್ನ ಎಂಬವರ ಮಗ ಲಿಯಾನ್ ವಿಲ್ಸನ್ ಅಮ್ಮನ್ನ (19) ಮೃತ‌ ದುರ್ದೈವಿ. 

ಇವರು ಸರ್ವಿಸ್ ರಸ್ತೆಯಲ್ಲಿ ಅಂಬಲಪಾಡಿ ಕಡೆಯಿಂದ ಕಿನ್ನಿಮುಲ್ಕಿ ಕಡೆಗೆ ಬೈಕಿನಲ್ಲಿ ಹೋಗುತ್ತಿರುವಾಗ ನಿಯಂತ್ರಣ ತಪ್ಪಿದ ಬೈಕ್ ರಸ್ತೆ ಬದಿಯ ಚರಂಡಿಗೆ ಬಿತ್ತೆನ್ನಲಾಗಿದೆ.

ಇದರಿಂದ ಗಂಭೀರವಾಗಿ ಗಾಯಗೊಂಡ ಸವಾರ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಇವರು ಮಣಿಪಾಲದಲ್ಲಿ ಬಿಬಿಎಂ ವಿದ್ಯಾರ್ಥಿಯಾಗಿದ್ದರು.ಈ ಬಗ್ಗೆ ಉಡುಪಿ ನಗರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -
spot_img

Latest News

error: Content is protected !!