Tuesday, April 30, 2024
Homeಕರಾವಳಿಬೆಳ್ತಂಗಡಿ: ರಸ್ತೆ ಅಪಘಾತ, ಶೌರ್ಯ ಸಂಚಲನ ಕಾರ್ಯಕ್ರಮಕ್ಕೆ ಬಂದಿದ್ದ ಯುವಕ ಸ್ಥಳದಲ್ಲೇ ಸಾವು

ಬೆಳ್ತಂಗಡಿ: ರಸ್ತೆ ಅಪಘಾತ, ಶೌರ್ಯ ಸಂಚಲನ ಕಾರ್ಯಕ್ರಮಕ್ಕೆ ಬಂದಿದ್ದ ಯುವಕ ಸ್ಥಳದಲ್ಲೇ ಸಾವು

spot_img
- Advertisement -
- Advertisement -

ಬೆಳ್ತಂಗಡಿ: ನಗರದ ಸಂತೆಕಟ್ಟೆ ಸಮೀಪ ನಡೆದ ರಸ್ತೆ ಅಪಘಾತದಲ್ಲಿ ಬೈಕ್ ಸವಾರನೊಬ್ಬ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಕಾರು ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಮಡಂತ್ಯಾರ್ ನ ಬಂಗೇರ ಕಟ್ಟೆ ನಿವಾಸಿ ಯತಿನ್ ಮೃತಪಟ್ಟಿದ್ದಾರೆ.

ಯತಿನ್ ಇಂದು ಗೀತಾ ಜಯಂತಿ ಅಂಗವಾಗಿ ಮೇಲಂತಬೆಟ್ಟುವಿನಲ್ಲಿ ನಡೆದ ಶೌರ್ಯ ಸಂಚಲನ ಕಾರ್ಯಕ್ರಮದಲ್ಲಿ ಭಾಗವಹಿಸಿ, ಬೆಳ್ತಂಗಡಿ ಗೆ ಹಿಂದಿರುಗುತ್ತಿದ್ದ ಈ ಅವಘಡ ಸಂಭವಿಸಿದೆ. ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದು, ಆದರೆ ಆ ವೇಳೆಯಲ್ಲಿ ಯತಿನ್ ಕೊನೆಯುಸಿರೆಳೆದಿದ್ದರು.

ಅಪಘಾತದಲ್ಲಿ ಯತಿನ್ ಜೊತೆ ಬೈಕ್ ನಲ್ಲಿ ಪ್ರಯಾಣಿಸುತ್ತಿದ್ದ ಪ್ರದೀಪ್ ಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮೃತ ಯತಿನ್ ಗುರುವಾಯನಕೆರೆಯಲ್ಲಿ ವೆಲ್ಡಿಂಗ್ ಶಾಪ್ ನಲ್ಲಿ ಕೆಲಸ ನಿರ್ವಹಿಸುತ್ತಿದ್ದರು ಎಂದು ತಿಳಿದು ಬಂದಿದೆ.

- Advertisement -
spot_img

Latest News

error: Content is protected !!