- Advertisement -
- Advertisement -
ಉಪ್ಪಿನಂಗಡಿ: ಬಸ್ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಇಲ್ಲಿನ ಹಳೇ ಅರಣ್ಯ ತಪಾಸಣಾ ಕೇಂದ್ರದ ಬಳಿ ನಡೆದಿದೆ. ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಬೈಕ್ ಗೆ ಡಿಕ್ಕಿ ಹೊಡೆದಿದೆ.
ಬಜತ್ತೂರು ಗ್ರಾಮದ ಬೆದ್ರೋಡಿ ನಿವಾಸಿ ಭರತ್ ಕುಮಾರ್ (19) ಅಪಘಾತಕ್ಕೊಳಗಾದ ಯುವಕ. ಘಟನೆಯಲ್ಲಿ ಬೈಕ್ ಬಸ್ಸಿನಡಿ ಸಿಲುಕಿದ್ದು, ಸವಾರ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾನೆ. ಪುತ್ತೂರು ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲುಗೊಂಡಿದೆ.
- Advertisement -