- Advertisement -
- Advertisement -
ಉಡುಪಿ: ಬೈಕ್ ಸ್ಕಿಡ್ ಆಗಿ ಡಿವೈಡರ್ ಗೆ ಢಿಕ್ಕಿಯಾಗಿ ಬೈಕ್ ಸವಾರ ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕೋಟ ಮಸೀದಿ ಬಳಿ ನಡೆದಿದೆ.
ಕೋಟ ಮಣೂರು ನಿವಾಸಿ ವಿಕಾಸ್ ಆಚಾರ್ಯ (22) ಮೃತ ದುರ್ದೈವಿ. ಸೋಮವಾರ ರಾತ್ರಿ 1:30 ರ ಸುಮಾರಿಗೆ ಸಾಸ್ತಾನ ದಿಂದ ಕೋಟ ಮಣೂರು ಕಡೆ ಬರುತ್ತಿದ್ದ ವೇಳೆ ಕೋಟ ಗುಜಿರಿ ಅಂಗಡಿ ಸಮೀಪ ಬೈಕ್ ನಿಯಂತ್ರಣ ತಪ್ಪಿದ ಪರಿಣಾಮ ಹೆದ್ದಾರಿಯ ಡಿವೈಡರ್ ಗೆ ಢಿಕ್ಕಿ ಹೊಡೆದು ಪಲ್ಟಿಯಾಗಿದೆ .
ಗಂಭೀರವಾಗಿ ಗಾಯಗೊಂಡ ವಿಕಾಸ್ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -