Monday, May 20, 2024
Homeಕರಾವಳಿಬಂಟ್ವಾಳ; ಬೈಕ್ ಕದ್ದುಕೊಂಡು ಹೋಗುವಾಗ ಅಪಘಾತ; ಸ್ಥಳದಲ್ಲೇ ಬೈಕ್ ಬಿಟ್ಟ ಕಳ್ಳ ಪರಾರಿ

ಬಂಟ್ವಾಳ; ಬೈಕ್ ಕದ್ದುಕೊಂಡು ಹೋಗುವಾಗ ಅಪಘಾತ; ಸ್ಥಳದಲ್ಲೇ ಬೈಕ್ ಬಿಟ್ಟ ಕಳ್ಳ ಪರಾರಿ

spot_img
- Advertisement -
- Advertisement -

ಬಂಟ್ವಾಳ: ಬೈಕ್ ಕದ್ದುಕೊಂಡು ಹೋಗುವಾಗ ಅಪಘಾತವಾಗಿ ಕಳ್ಳ ಸ್ಥಳದಲ್ಲೇ ಬೈಕ್ ಬಿಟ್ಟು ಪರಾರಿಯಾದ ಘಟನೆ ಬಂಟ್ವಾಳ ತಾಲೂಕಿನ ಬ್ರಹ್ಮರಕೋಟ್ಲು ಎಂಬಲ್ಲಿ ನಡೆದಿದೆ.

ಬಂಟ್ವಾಳದ ತುಂಬೆ ಶಾಲಾ ಮಕ್ಕಳ ವಾಹನ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದೆ. ಅತೀ ವೇಗ ‌ಮತ್ತು‌ ಅಜಾಗಕರುಕತೆಯಿಂದ ಬೈಕ್ ಸವಾರ ಶಾಲಾ ವಾಹನಕ್ಕೆ ಡಿಕ್ಕಿ ಹೊಡೆದಿದ್ದು ಘಟನೆಯ ಬಳಿಕ ಬೈಕನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾನೆ.

ವಾಮದಪದವು ಗ್ರಾಮದ ಕೊರಗಟ್ಟೆ ನಿವಾಸಿ ಬೇಬಿ ಗೌಡ ಎಂಬವರ ಸ್ಲೆಂಡರ್ ಬೈಕ್ ಕಳವಾಗಿತ್ತು. ಬೇಬಿ ಗೌಡರ ಸಂಬಂಧಿಕರೋರ್ವರು ಅನಾರೋಗ್ಯದಿಂದ ಇದ್ದು ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಕಾರಣ ವಾಮದಪದವಿನಿಂದ ಬಿಸಿರೋಡು ವರೆಗೆ ಬೈಕ್ ನಲ್ಲಿ ಬಂದಿದ್ದು , ಆ ಬಳಿಕ ಬಿಸಿರೋಡಿನ ಪ್ಲೈ ಓವರ್ ನ ಅಡಿ ಭಾಗದಲ್ಲಿ ಬೈಕನ್ನು ನಿಲ್ಲಿಸಿ, ಮಂಗಳೂರಿಗೆ ಬಸ್ ನಲ್ಲಿ ತೆರಳಿದ್ದರು. ಆಸ್ಪತ್ರೆಗೆ ಭೇಟಿ ನೀಡಿ ಬಸ್ ನಲ್ಲಿ ವಾಪಸು ಬರುವಾಗ ನಿಮ್ಮ ಬೈಕ್ ಬ್ರಹ್ಮರಕೋಟ್ಲು ಎಂಬಲ್ಲಿ ಅಪಘಾತ ಸಂಭವಿಸಿದೆ ಎಂದು ಮೊಬೈಲ್ ಗೆ ಕರೆ ಮಾಡಿ ಸಾರ್ವಜನಿಕರು ತಿಳಿಸಿದ್ದಾರೆ. ಶಾಕ್ ಆದ ಬೇಬಿ ಗೌಡ ಅವರು ನಾನು ಬೈಕ್ ಬಿಸಿರೋಡಿನಲ್ಲಿ ನಿಲ್ಲಿಸಿದ್ದೆ ಅಲ್ಲಿ ಹೇಗೆ ಬಂತು ಎಂದು ಪ್ರಶ್ನಿಸಿದ್ದಾರೆ. ಬಳಿಕ ಸ್ಥಳಕ್ಕೆ ಭೇಟಿ ನೀಡಿ ನೋಡಿದಾಗ ವಿಚಾರ ಸ್ಪಷ್ಟವಾಗಿದೆ. ಯಾರೋ ಅಂದಾಜು 45 ವರ್ಷದ ವ್ಯಕ್ತಿ ಬೈಕ್ ಕಳವು ಮಾಡಿ ಕೊಂಡು ಹೋಗುತ್ತಿದ್ದಾಗ ಅಪಘಾತ ಸಂಭವಿಸಿದೆ ಅನ್ನೋದು ಗೊತ್ತಾಗಿದೆ. ಬೈಕ್ ಕಳ್ಳ ಬೈಕ್ ಬಿಟ್ಟು ಸ್ಥಳದಿಂದ ಕಾಲ್ಕಿತ್ತಿದ್ದಾನೆ. ಇನ್ನು ಓಡುವ ಭರದಲ್ಲಿ ಆತ ಚಪ್ಪಲಿ ಕೂಡ ಬಿಟ್ಟು ಹೋಗಿದ್ದಾನೆ. ಇತ್ತೀಚಿನ ದಿನಗಳಲ್ಲಿ ಬಿಸಿರೋಡಿನಿಂದ ಅನೇಕ ವಾಹನಗಳ ಕಳವು ನಡೆದಿದೆ. ಅದರಲ್ಲೂ ಬಿಸಿರೋಡಿನ ಒವರ್ ಬ್ರಿಡ್ಜ್ ನ ಅಡಿಭಾಗದಲ್ಲಿ ನಿಲ್ಲಿಸಲಾಗಿದ್ದ ಅನೇಕ ದ್ವಿಚಕ್ರ ವಾಹನಗಳ ಕಳವು ನಡೆದಿದ್ದು,ಇದರಲ್ಲಿ ‌ಕೇವಲ ಕೆಲವೇ ವಾಹನಗಳ ಪತ್ತೆಯಾಗಿದ್ದು ಬಿಟ್ಟರೆ ಉಳಿದ ವಾಹನಗಳ ಇನ್ನೂ ಕೂಡ ಪತ್ತೆಯಾಗಿಲ್ಲ. ಹಾಗಾಗಿ ಬಿಸಿರೋಡಿನ ಹೃದಯ ಭಾಗದಲ್ಲಾದರೂ ಉತ್ತಮ ಗುಣಮಟ್ಟದ ಸಿಸಿ ಕ್ಯಾಮೆರಾ ಅಳವಡಿಸಬೇಕು ಎಂದು ಆಗ್ರಹಿಸಿದ್ದಾರೆ.

- Advertisement -
spot_img

Latest News

error: Content is protected !!