- Advertisement -
- Advertisement -
ಕುಂದಾಪುರ: ಹಾಡಹಗಲೇ ನಿಲ್ಲಿಸಿದ್ದ ಬೈಕ್ ಕಳ್ಳತನ ಮಾಡಿರುವ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ರೈಲ್ವೆ ನಿಲ್ದಾಣದ ಬಳಿ ನಡೆದಿದೆ. ಕಳ್ಳರಿಬ್ಬರ ಕರಾಮತ್ತು ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಯೋಗೀಶ್ ಪೂಜಾರಿ ಎಂಬವರು ರೈಲ್ವೆ ನಿಲ್ದಾಣ ಬಳಿ ಬೈಕ್ ನಿಲ್ಲಿಸಿ ಹೋಗಿದ್ದು, ವಾಪಸ್ ಬರುವಾಗ ಕಳವಾಗಿತ್ತು. ಪೊಲೀಸರು ತನಿಖೆ ನಡೆಸಿದಾಗ ಚೋರರು ಬೈಕ್ ಕಳವು ಮಾಡುತ್ತಿರುವ ದೃಶ್ಯ ಸಿಸಿ ಟಿವಿಯಲ್ಲಿ ಪತ್ತೆಯಾಗಿದ್ದು, ಸಿಸಿಟಿವಿ ದೃಶ್ಯಾವಳಿ ಆಧರಿಸಿ ಇಬ್ಬರು ಚೋರರ ಬಂಧನಕ್ಕೆ ಬಲೆ ಬೀಸಿದ್ದಾರೆ.
- Advertisement -