Thursday, June 4, 2026
Homeಕರಾವಳಿಕೇರಳದಲ್ಲಿ ಹಕ್ಕಿ ಜ್ವರ ಕಾಣಿಸಿಕೊಂಡ ಹಿನ್ನೆಲೆ; ಗಡಿ ಪ್ರದೇಶಗಳಲ್ಲಿ ಕಟ್ಟೆಚ್ಚರ ವಹಿಸಿದ ದಕ್ಷಿಣ ಕನ್ನಡ ಜಿಲ್ಲಾಡಳಿತ

ಕೇರಳದಲ್ಲಿ ಹಕ್ಕಿ ಜ್ವರ ಕಾಣಿಸಿಕೊಂಡ ಹಿನ್ನೆಲೆ; ಗಡಿ ಪ್ರದೇಶಗಳಲ್ಲಿ ಕಟ್ಟೆಚ್ಚರ ವಹಿಸಿದ ದಕ್ಷಿಣ ಕನ್ನಡ ಜಿಲ್ಲಾಡಳಿತ

- Advertisement -
- Advertisement -

ಮಂಗಳೂರು: ನೆರೆಯ ಕೇರಳದಲ್ಲಿ ಹಕ್ಕಿ ಜ್ವರ ಕಾಣಿಸಿಕೊಂಡ ಹಿನ್ನೆಲೆ  ಗಡಿ ಪ್ರದೇಶಗಳಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತ ಕಟ್ಟೆಚ್ಚರ ವಹಿಸಿದೆ.

ಸುಳ್ಯದ ಜಾಲ್ಸೂರು, ಬಂಟ್ವಾಳದ ಸಾರಡ್ಕ ಮತ್ತು ಉಳ್ಳಾಲದ ತಲಪಾಡಿಯ ಚೆಕ್ ಪೋಸ್ಟ್ ಗಳಲ್ಲಿ ಹಕ್ಕಿ ಜ್ವರ ಹರಡುವುದನ್ನು ತಡೆಯಲು ಕಣ್ಗಾವಲು ತೀವ್ರಗೊಳಿಸಲಾಗಿದೆ ಎಂದು ಪಶುಸಂಗೋಪನಾ ಇಲಾಖೆ ಉಪ ನಿರ್ದೇಶಕ ಡಾ.ಅರುಣ್ ಕುಮಾರ್ ಶೆಟ್ಟಿ ತಿಳಿಸಿದ್ದಾರೆ.

“ಹಕ್ಕಿ ಜ್ವರವು ಹೊಲಗಳು ಮತ್ತು ಮಾಂಸ ಸಂಸ್ಕರಣಾ ಘಟಕಗಳಲ್ಲಿ ಕೆಲಸ ಮಾಡುವ ಮನುಷ್ಯರ ಮೇಲೆ ಪರಿಣಾಮ ಬೀರುತ್ತದೆ. ದಕ್ಷಿಣ ಕನ್ನಡವು ಕೇರಳದ ಕಾಸರಗೋಡು ಜಿಲ್ಲೆಗೆ ಕೋಳಿಯನ್ನು ಪೂರೈಸುತ್ತದೆ. ನಾವು ಪ್ರತಿದಿನ ಆರು ಲೋಡ್ ಕೋಳಿಯನ್ನು ಸಾಗಿಸುತ್ತಿದ್ದೆವು, ಆದರೆ ಬೇಸಿಗೆಯಿಂದಾಗಿ ಉತ್ಪಾದನೆ ಕಡಿಮೆ ಇರುವುದರಿಂದ ಈಗ ಎರಡಕ್ಕೆ ಇಳಿದಿದೆ. “

ಮಂಗಳೂರಿನಿಂದ 400 ಕಿ.ಮೀ ದೂರದಲ್ಲಿರುವ ಕೇರಳದ ಅಲಪ್ಪುಳ ಜಿಲ್ಲೆಯಲ್ಲಿ ಹಕ್ಕಿ ಜ್ವರ ಪ್ರಕರಣಗಳು ವರದಿಯಾಗಿವೆ. ಸದ್ಯ ಜಿಲ್ಲೆಯಲ್ಲಿ ಯಾವುದೇ ಪ್ರಕರಣ ದಾಖಲಾಗಿಲ್ಲ. ಆದಾಗ್ಯೂ, ನಾವು ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದೇವೆ. ಜಿಲ್ಲಾಡಳಿತವು ಚೆಕ್ ಪೋಸ್ಟ್ ಗಳನ್ನು ತೆರೆದಿದ್ದು, ಕೇರಳದಲ್ಲಿ ಕೋಳಿಯನ್ನು ಇಳಿಸಿದ ನಂತರ ಜಿಲ್ಲೆಗೆ ಪ್ರವೇಶಿಸುವ ಟ್ರಕ್ ಗಳ ಮೇಲೆ ಆದ್ಯತೆಯ ಮೇರೆಗೆ ಕಣ್ಗಾವಲು ನಡೆಸಲಾಗುತ್ತದೆ” ಎಂದು ಶೆಟ್ಟಿ ಹೇಳಿದ್ದಾರೆ.

- Advertisement -

Latest News

error: Content is protected !!