ಮಂಗಳೂರು: ಬಲ್ಮಠದ ಸಿಎಸ್ಐ ಕೆಎಸ್ಡಿ ಸಭಾ ಪ್ರಾಂತ ಕಚೇರಿಯಲ್ಲಿ ಬಿಷಪ್ ಕಾರ್ಯದರ್ಶಿಯಾಗಿ ಕೆಲಸ ನಿರ್ವಹಿಸುತ್ತಿದ್ದ
ಮಹಿಳೆಗೆ ಲೈಂಗಿಕ ಕಿರುಕುಳ ಹಾಗೂ ಮಾನಸಿಕ ಕಿರುಕುಳ ನೀಡಿ ಜೀವ ಬೆದರಿಕೆ ಹಾಕಿರುವ ಆರೋಪದಡಿ 6 ಮಂದಿ ವಿರುದ್ಧ ಮಂಗಳೂರಿನ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಖಜಾಂಚಿ ವಿನ್ಸೆಂಟ್ ಪಾಲನ್ನ 4 ವರ್ಷಗಳಿಂದ ದೈಹಿಕ ಮತ್ತು ಮಾನಸಿಕ ಕಿರುಕುಳ ನೀಡಿ ಕೆಲಸದಿಂದ ತೆಗೆಯಲು ಪ್ರಯತ್ನಿಸಿದ್ದಾರೆ. ಅಲ್ಲದೇ ಅತ್ಯಾಚಾರವೆಸಗಿದ್ದಾರೆ. ತನಗೆ ಬೇರೆಯವರೊಂದಿಗೆ ಅನೈತಿಕ ಸಂಬಂಧ ಇದೆ ಎಂದು ಹೇಳಿ ಹೆದರಿಸಿದ್ದಾರೆ ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ.
2022ರ ಆ.19ರಂದು ಕಾನೂನು ಸಲಹೆಗಾರ ಫಾದರ್ ನೊಯೆಲ್ ಕರ್ಕಡ ಕೂಡ ನನ್ನ ಮೇಲೆ ಅತ್ಯಾಚಾರವೆಸಗಿದ್ದಾರೆ ಎಂದ ಮಹಿಳೆ ಆರೋಪಿಸಿದ್ದಾರೆ. ಮೊಬೈಲ್ನಲ್ಲಿ ಅಶ್ಲೀಲ ವೀಡಿಯೋ ನೋಡುವಂತೆ ಬಲವಂತ ಮಾಡಿದ್ದಾರೆ. ಸ್ಟೋರ್ ಕೀಪರ್ ಮನೋಹರ ಅಮ್ಮನ್ನ ಮತ್ತು ಬಿಷಪ್ ಅವರ ಕಾರು ಚಾಲಕ ಕರುಣಾಕರ ಕುಂದರ್ ಹಿಂಬಾಲಿಸಿ ಅವಾಚ್ಯ ಶಬ್ದಗಳಿಂದ ಬೈದಿದ್ದಾರೆ.ಸಿಸ್ಟರ್ ಸುಜಾತ ಮತ್ತು ಕಾರ್ಯದರ್ಶಿ ವಿಲಿಯಂ ಕೇರಿ ಅವರು ಕೂಡ ಅವಾಚ್ಯವಾಗಿ ಬೈದಿದ್ದಾರೆ ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ.
ಅಲ್ಲದೇ ಆರೋಪಿಗಳು ಪ್ರಭಾವಶಾಲಿಗಳಾಗಿದ್ದು ಬೆದರಿಸಿರುವುದರಿಂದ ಇದುವರೆಗೆ ದೂರು ನೀಡಿರಲಿಲ್ಲ ಎಂದು ಮಹಿಳೆ ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದು ಅದರಂತೆ ಐಪಿಸಿ ಕಲಂ 354, 354ಎ, 354ಡಿ, 504, 506 ಮತ್ತು 34ರಡಿ ಎಫ್ಐಆರ್ ದಾಖಲಾಗಿದೆ.