- Advertisement -
- Advertisement -
ಬೆಂಗಳೂರು: ಮೃತ ಪ್ರವೀಣ್ ನೆಟ್ಟಾರು ಕುಟುಂಬಕ್ಕೆ ರಾಜ್ಯ ಬಿಜೆಪಿ ವತಿಯಿಂದ 25 ಲಕ್ಷ ರೂಪಾಯಿ ನೆರವು ನೀಡಲು ನಿರ್ಧಾರ ಮಾಡಲಾಗಿದೆ.
ಪ್ರವೀಣ್ ಕುಟುಂಬಕ್ಕೆ ಹೊಸ ಮನೆ ನಿರ್ಮಾಣ ಮಾಡಿಕೊಡುವ ಜವಾಬ್ದಾರಿಯನ್ನು ಸಂಸದ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲು ವಹಿಸಿಕೊಂಡಿದ್ದಾರೆ.
ಇಂದು ಮಧ್ಯಾಹ್ನ 3 ಗಂಟೆಗೆ ಬೆಂಗಳೂರಿನಿಂದ ಮಂಗಳೂರಿಗೆ ಆಗಮಿಸಲಿರುವ ನಳೀನ್ ಕುಮಾರ್ ಕಟೀಲು, ಸಂಜೆ ಜಿಲ್ಲೆಯ ಸಚಿವರು ಮತ್ತು ಶಾಸಕರೊಂದಿಗೆ ನೆಟ್ಟಾರಿಗೆ ತೆರಳಿ ಮೃತ ಪ್ರವೀಣ್ ನಿವಾಸಕ್ಕೆ ಭೇಟಿ ನೀಡಲಿದ್ದಾರೆ.
ಈ ವೇಳೆ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಲಿರುವ ನಳೀನ್ ಕುಮಾರ್ 25 ಲಕ್ಷ ರೂಪಾಯಿ ಚೆಕ್ ಹಸ್ತಾಂತರಿಸಲಿದ್ದಾರೆ.
- Advertisement -